ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm