ಬ್ರೇಕಿಂಗ್ ನ್ಯೂಸ್
25-01-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ತೊರೆದು ಮರಳಿ ಮಾತೃಪಕ್ಷ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್ಗೆ ಸಂಕಷ್ಟ ಎದುರಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುತ್ತದೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನನಗೆ 11:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ, ಬಿಜೆಪಿಗೆ ಹೋಗ್ತಿದ್ದೀನಿ ರಾಜಿನಾಮೆ ಕೊಡುತ್ತೇನೆ ಎಂದರು. ನಾನು ರಾಜಿನಾಮೆ ಕಳಿಸಿಕೊಡಿ ಅಂತ ಹೇಳಿದ್ದೇನೆ.

ಆದರೆ, ಶೆಟ್ಟರ್ ಅವರು ರಾಜೀನಾಮೆ ಪತ್ರವನ್ನು ಮೇಲ್ ಮಾಡ್ತೀನಿ ಎಂದಿದ್ದರು. ಇನ್ನೂ ನನಗೆ ಮೇಲ್ ಬಂದಿಲ್ಲ. ಮೇಲ್ ಬಂದರೂ ಅದನ್ನು ಗಣನೆ ತೆಗೆದುಕೊಳ್ಳಲು ಆಗೋದಿಲ್ಲ. ಯಾವುದೇ ಸದಸ್ಯ ನೇರವಾಗಿ ಬಂದು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ರಾಜೀನಾಮೆ ಪಡೆಯುವಾಗ, ಸ್ವ ಇಚ್ಛೆಯಿಂದ ರಾಜೀನಾಮೆ ಕೊಡ್ತಿದ್ದೀರಾ ಅಂತ ಕೇಳ್ತೀವಿ. ಅವರು ಪಕ್ಷ ಬಿಟ್ಟು ಬೇರೆ ಪಕ್ಷ ಹೋಗೋದು ಅವರ ಇಷ್ಟ. ಆದರೆ ಜಗದೀಶ್ ಶೆಟ್ಟರ್ ಅವರು ಈಗಲೂ ಕಾಂಗ್ರೆಸ್ ಸದಸ್ಯರು. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆದರೂ ಆಗಬಹುದು ಎಂದು ಸಭಾಪತಿ ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ರಾಜೀನಾಮೆ ವಿಚಾರದಲ್ಲಿ ಯಾರಾದ್ರೂ ದೂರು ಕೊಡಬಹುದು. ಇದುವರೆಗು ಯಾವ ಪಕ್ಷದ ನಾಯಕರು ನನ್ನ ಜೊತೆ ಮಾತನಾಡಿಲ್ಲ. ಕಾನೂನು ಪ್ರಕಾರ ಯಾವುದೇ ಸದಸ್ಯ ರಾಜೀನಾಮೆ ಕೊಟ್ಟ ನಂತರವಷ್ಟೇ ಬೇರೆ ಪಕ್ಷಕ್ಕೆ ಹೋಗಬೇಕು ಎಂದು ಹೊರಟ್ಟಿ ಹೇಳಿದ್ದಾರೆ.
Jagadish Shettar, who quit the Congress ahead of the Lok Sabha elections and returned to his parent party BJP, is in trouble. Council Chairman Basavaraj Horatti said that the anti-defection law will be applicable to Jagadish Shettar.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm