ಬ್ರೇಕಿಂಗ್ ನ್ಯೂಸ್
27-01-24 12:27 pm HK News Desk ಕರ್ನಾಟಕ
ಗದಗ, ಜ.27: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಎರಡು ದೇಶದ ಪ್ರಧಾನಿಗಳಿಬ್ಬರು ಸಾವಿಗೀಡಾಗಲಿದ್ದಾರೆ. ಭೀಕರ ಯುದ್ಧ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣು ಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ದೇವರು, ಧರ್ಮ, ಸತ್ಯ, ನಂಬಿಕೆ ವಿಚಾರದಲ್ಲಿ ಜನರು ಪ್ರಬುದ್ಧರಾಗಲಿದ್ದಾರೆ. ದೇಶದ ಹಲವಾರು ಕಡೆಗಳಲ್ಲಿ ದೈವಾಂಶ ಸಂಭೂತರ ಹೆಸರಿನಲ್ಲಿ ದೇವಸ್ಥಾನ, ಗುಡಿ, ಗೋಪುರಗಳನ್ನು ನಿರ್ಮಿಸಿ ಸ್ಮರಣೆ ಮಾಡುವುದು ಹೆಚ್ಚಲಿದೆ. ಆ ದಿಸೆಯಲ್ಲಿ ಶ್ರೀರಾಮನ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಧಾರ್ಮಿಕ ಪ್ರತೀಕವಾಗಿದೆ ಎಂದು ಹೇಳಿದರು.
ಭಾರತೀಯರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಿರುವುದು ಒಳ್ಳೆಯ ಬೆಳವಣಿಗೆ. ಶ್ರೀರಾಮನ ಜನ್ಮಸ್ಥಳದಲ್ಲಿ ಬೃಹತ್ ದೇಗುಲ ನಿರ್ಮಾಣಗೊಂಡಿರುವುದು ಒಳ್ಳೆಯ ಸೂಚನೆ ಸಿಕ್ಕಂತಾಗಿದೆ. ಹಾಗಂತ, ರಾಜಕೀಯದಲ್ಲಿ ಧಾರ್ಮಿಕತೆ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.
ದೇಶ ಹಾಗೂ ರಾಜ್ಯ ರಾಜಕೀಯ ಕುರಿತು ಮಾತನಾಡಿದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ಹಾಗೂ ಯುಗಾದಿ ನಂತರ ಭವಿಷ್ಯ ಹೇಳಲಾಗುತ್ತದೆ. ಸಂಕ್ರಾಂತಿ ನಂತರ ವ್ಯಾಪಾರ, ವಾಣಿಜ್ಯ ಲಾಭ ನಷ್ಟದ ಬಗ್ಗೆ, ಯುಗಾದಿ ನಂತರ ದೇಶದ ಸಮಗ್ರ ಮಳೆ, ಬೆಳೆ, ಜನರು, ರಾಜಕೀಯದ ಬಗ್ಗೆ ಹೇಳಲಾಗುತ್ತದೆ. ಈಗ ರಾಜಕೀಯ ಕುರಿತು ಹೇಳುವುದು ಸ್ತುತ್ಯರ್ಹವಲ್ಲ. ಯುಗಾದಿ ನಂತರ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಭವಿಷ್ಯ ಹೇಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
Dr. Sri Shivananda Shivayogirajendra Swamiji of Kodi Mutt in Gadag has predicted this. Kodisri has predicted the year 2024. There will be untimely rain. There are no good days for the world in 2024.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am