ಬ್ರೇಕಿಂಗ್ ನ್ಯೂಸ್
23-11-20 12:35 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 23: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಬೆಳಗಿನ ಜಾವ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ಮನೆ ಮೇಲೆ ದಾಳಿ ನಡೆಸಿತು. ದಾಳಿಯ ನೋಟಿಸ್ ಕೊಟ್ಟು ಮನೆ ಒಳಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯವರ ಮೊಬೈಲ್ ಗಳನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಐಎಂಎ ನಿಂದ ಚಿನ್ನದ ಆಭರಣ ಹಾಗೂ ಕೋಟ್ಯಂತರ ರೂಪಾಯಿ ಬೇಗ್ ಪಡೆದ ಆರೋಫಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಹೆಚ್ಚುವರಿ ಸಾಕ್ಷಾಧಾರಗಳ ಸಂಗ್ರಹಕ್ಕೆ ಮುಂದಾಗಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ರೋಷನ್ ಬೇಗ್ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಹಾಜರು ಪಡಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಬಂಧನ ಆಗುತ್ತಿದ್ದಂತೆ ಇದೀಗ ಸಿಬಿಐ ದಾಳಿ ನಡೆದಿದೆ.
ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.
A search by the Central Bureau of Investigation (CBI) is underway at the Bengaluru residence of former Karnataka minister R Roshan Baig.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm