ಬ್ರೇಕಿಂಗ್ ನ್ಯೂಸ್
23-11-20 12:35 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 23: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಬೆಳಗಿನ ಜಾವ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ಮನೆ ಮೇಲೆ ದಾಳಿ ನಡೆಸಿತು. ದಾಳಿಯ ನೋಟಿಸ್ ಕೊಟ್ಟು ಮನೆ ಒಳಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯವರ ಮೊಬೈಲ್ ಗಳನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಐಎಂಎ ನಿಂದ ಚಿನ್ನದ ಆಭರಣ ಹಾಗೂ ಕೋಟ್ಯಂತರ ರೂಪಾಯಿ ಬೇಗ್ ಪಡೆದ ಆರೋಫಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸಿರುವ ಅಧಿಕಾರಿಗಳು ಹೆಚ್ಚುವರಿ ಸಾಕ್ಷಾಧಾರಗಳ ಸಂಗ್ರಹಕ್ಕೆ ಮುಂದಾಗಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ರೋಷನ್ ಬೇಗ್ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆ ಮುಂದೆ ಹಾಜರು ಪಡಿಸಿದ್ದರು. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಬಂಧನ ಆಗುತ್ತಿದ್ದಂತೆ ಇದೀಗ ಸಿಬಿಐ ದಾಳಿ ನಡೆದಿದೆ.
ಐಎಂಎ ಕಂಪನಿಯಿಂದ 200 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದ ಆರಂಭಿಕ ದಿನಗಳಲ್ಲಿ ಐಎಂಎ ಸಂಸ್ಥಾಪಕ, ಸಿಇಓ ಮನ್ಸೂರ್ ಖಾನ್ ಅವರೇ ರೋಷನ್ ಬೇಗ್ ಅವರ ಮೇಲೆ ಆರೋಪ ಮಾಡಿದ್ದರು. ಐಎಂಎ ಕಂಪನಿಯಿಂದ ರೋಷನ್ ಬೇಗ್ ಬೇಕಾದಾಗೆಲ್ಲಾ ಹಣ ಪಡೆದಿದ್ದಾರೆ. ಅದನ್ನು ವಾಪಸು ಕೇಳಿದಾಗ ಸ್ಥಳೀಯ ರೌಡಿಗಳಿಂದ ಬೆದರಿಸಿದ್ದರು ಎಂಬ ಅಡಿಯೋ ಅಂದಿನ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರಿಗೆ ಮನ್ಸೂರ್ ಆಲಿಖಾನ್ ಅವರೇ ಕಳಿಸಿಕೊಟ್ಟಿದ್ದರು.
A search by the Central Bureau of Investigation (CBI) is underway at the Bengaluru residence of former Karnataka minister R Roshan Baig.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm