ಬ್ರೇಕಿಂಗ್ ನ್ಯೂಸ್
23-11-20 03:03 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಚಳಿ ಶುರುವಾಗಿರುವುದರಿಂದ ಸದ್ಯಕ್ಕೆ ಶಾಲೆ ಆರಂಭಿಸದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣಾಧಿಕಾರಿಗಳು ಮತ್ತು ಉನ್ನತ ಮಟ್ಟದ ತಜ್ಞರ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸದ್ಯಕ್ಕೆ ಶಾಲೆ ತೆರೆಯುವುದು ಬೇಡ ಎನ್ನುವ ಸಲಹೆ ಕೇಳಿಬಂದಿದೆ. ಡಿಸೆಂಬರ್ ನಲ್ಲಿ ಚಳಿ ಇರುವುದರಿಂದ ಈ ವೇಳೆಗೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಪೋಷಕರು ಮತ್ತು ಮಕ್ಕಳ ಆತಂಕದ ನಡುವೆ ಶಾಲೆ ಆರಂಭಿಸುವುದು ಬೇಡ ಎನ್ನುವ ಬಗ್ಗೆ ಸಭೆಯಲ್ಲಿ ಸಚಿವರು ನಿರ್ಣಯ ಕೈಗೊಂಡಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಮತ್ತೆ ಸಭೆ ನಡೆಸಿ, ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆಯ ತಾಂತ್ರಿಕ ಸಮಿತಿ ವರದಿ ನೀಡಿದ್ದು, ಒಂದರಿಂದ 8ನೇ ತರಗತಿ ವರೆಗೆ ಈ ವರ್ಷ ಶಾಲೆ ತೆರೆಯುವುದು ಬೇಡ. ಜೊತೆಗೆ, 9ರಿಂದ ಪಿಯುಸಿ ವರೆಗೆ ಶಾಲೆ ತೆರೆಯಬೇಕೆಂಬ ಇಂಗಿತ ಇದೆ. ಆದರೆ, ಸದ್ಯಕ್ಕೆ ಚಳಿ ಇರುವುದರಿಂದ ಇಂಥ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವುದು ಬೇಡ ಎಂದು ನಿರ್ಧರಿಸಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಹೀಗಾಗಿ ಈ ಬಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಂಟನೇ ತರಗತಿ ಮಕ್ಕಳು ಶಾಲೆಗೆ ಹೋಗದೇ ಪಾಸ್ ಆಗುವುದು ಖಚಿತ ಆಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಮುಖ ಘಟ್ಟ ಆಗಿರುವುದರಿಂದ ಕೊನೆಯ ವೇಳೆಗೆ ಶಾಲೆ ತೆರೆದು ಮಕ್ಕಳಿಗೆ ಪಾಠ ಮಾಡಿಸಲು ಮತ್ತು ವಿಳಂಬವಾದರೂ ಪರೀಕ್ಷೆ ಬರೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.
ಚಂದನ ವಾಹಿನಿಯಲ್ಲಿ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ದಿನವೂ ಪಾಠ ಮಾಡಲಾಗುತ್ತಿದೆ. ಮಕ್ಕಳು ಅದನ್ನು ನೋಡಿ ಕಲಿಯಬೇಕೆಂದು ಸಚಿವರು ಸಲಹೆ ಮಾಡಿದ್ದಾರೆ.
The Karnataka government Monday decided not to reopen schools and pre-university colleges on December 1. According to Chief Minister B S Yediyurappa, the government “shall review the Covid-19 situation during the third week of December” to decide when to resume offline classes.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm