ಬ್ರೇಕಿಂಗ್ ನ್ಯೂಸ್
23-11-20 03:03 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಚಳಿ ಶುರುವಾಗಿರುವುದರಿಂದ ಸದ್ಯಕ್ಕೆ ಶಾಲೆ ಆರಂಭಿಸದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣಾಧಿಕಾರಿಗಳು ಮತ್ತು ಉನ್ನತ ಮಟ್ಟದ ತಜ್ಞರ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸದ್ಯಕ್ಕೆ ಶಾಲೆ ತೆರೆಯುವುದು ಬೇಡ ಎನ್ನುವ ಸಲಹೆ ಕೇಳಿಬಂದಿದೆ. ಡಿಸೆಂಬರ್ ನಲ್ಲಿ ಚಳಿ ಇರುವುದರಿಂದ ಈ ವೇಳೆಗೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಪೋಷಕರು ಮತ್ತು ಮಕ್ಕಳ ಆತಂಕದ ನಡುವೆ ಶಾಲೆ ಆರಂಭಿಸುವುದು ಬೇಡ ಎನ್ನುವ ಬಗ್ಗೆ ಸಭೆಯಲ್ಲಿ ಸಚಿವರು ನಿರ್ಣಯ ಕೈಗೊಂಡಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಮತ್ತೆ ಸಭೆ ನಡೆಸಿ, ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆಯ ತಾಂತ್ರಿಕ ಸಮಿತಿ ವರದಿ ನೀಡಿದ್ದು, ಒಂದರಿಂದ 8ನೇ ತರಗತಿ ವರೆಗೆ ಈ ವರ್ಷ ಶಾಲೆ ತೆರೆಯುವುದು ಬೇಡ. ಜೊತೆಗೆ, 9ರಿಂದ ಪಿಯುಸಿ ವರೆಗೆ ಶಾಲೆ ತೆರೆಯಬೇಕೆಂಬ ಇಂಗಿತ ಇದೆ. ಆದರೆ, ಸದ್ಯಕ್ಕೆ ಚಳಿ ಇರುವುದರಿಂದ ಇಂಥ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವುದು ಬೇಡ ಎಂದು ನಿರ್ಧರಿಸಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಹೀಗಾಗಿ ಈ ಬಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಂಟನೇ ತರಗತಿ ಮಕ್ಕಳು ಶಾಲೆಗೆ ಹೋಗದೇ ಪಾಸ್ ಆಗುವುದು ಖಚಿತ ಆಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಮುಖ ಘಟ್ಟ ಆಗಿರುವುದರಿಂದ ಕೊನೆಯ ವೇಳೆಗೆ ಶಾಲೆ ತೆರೆದು ಮಕ್ಕಳಿಗೆ ಪಾಠ ಮಾಡಿಸಲು ಮತ್ತು ವಿಳಂಬವಾದರೂ ಪರೀಕ್ಷೆ ಬರೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.
ಚಂದನ ವಾಹಿನಿಯಲ್ಲಿ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ದಿನವೂ ಪಾಠ ಮಾಡಲಾಗುತ್ತಿದೆ. ಮಕ್ಕಳು ಅದನ್ನು ನೋಡಿ ಕಲಿಯಬೇಕೆಂದು ಸಚಿವರು ಸಲಹೆ ಮಾಡಿದ್ದಾರೆ.
The Karnataka government Monday decided not to reopen schools and pre-university colleges on December 1. According to Chief Minister B S Yediyurappa, the government “shall review the Covid-19 situation during the third week of December” to decide when to resume offline classes.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm