ಬ್ರೇಕಿಂಗ್ ನ್ಯೂಸ್
10-02-24 08:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಸಂಸದ ಡಿಕೆ ಸುರೇಶ್ ಕೆಎಸ್ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.
ದೇಶದ್ರೋಹಿಗಳಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ ಹೀಗೆ ಹೇಳಿರಬಹುದು. ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳಬೇಕು?. ಬಡವರ ಮಕ್ಕಳನ್ನು ಯಾಕೆ ರೊಚ್ಚಿಗೆ ಎಬ್ಬಿಸ್ತಿರಾ?. ಪಕ್ಷದಲ್ಲಿ ಅವರನ್ನು ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಗಮನ ಸೆಳೆಯಲು ಮಾತನಾಡ್ತಿದ್ದಾರೆ ಎಂದು ಟೀಕಿಸಿದರು.
ನಾನೇ ಸಮಯ ಕೊಡ್ತೀನಿ. ಒಂದು ವಾರದಲ್ಲಿ ಯಾವಾಗ ಅಂತಲೂ ಹೇಳುವೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ. ಹೇಳಿಕೆ ಮೂಲಕ ಬಡವರ ಮಕ್ಕಳನ್ನು ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ ಎಂದು ಟಾಂಗ್ ನೀಡಿದರು.
ಫೆ. 08 ರಂದು ದಾವಣಗೆರೆಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪ ಅವರು, ''ಸಂಸದ ಡಿಕೆ ಸುರೇಶ್, ಶಾಸಕ ವಿನಯ್ ಕುಲಕರ್ಣಿ ಇಬ್ಬರು ದೇಶದ್ರೋಹಿಗಳು. ಇಬ್ಬರನ್ನು ಪಕ್ಷದಿಂದ ಕಿತ್ತು ಬಿಸಾಕಬೇಕು. ಈ ವೇದಿಕೆಯಿಂದಲೇ ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುವೆ. ಈ ರೀತಿಯ ದೇಶ ವಿಭಜನೆ ಎಂಬುದು ಜವಾಹರಲಾಲ್ ನೆಹರು ಕಾಲದಿಂದ ಬಂದಿದೆ'' ಎಂದು ಖಾರವಾಗಿ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆ ಬಳಿಕ ಅವರ ವಿರುದ್ಧ ಇದೀಗ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ದೂರು ಕೂಡ ದಾಖಲಾಗಿದೆ.
ಒಂದೆಡೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಭಾರತ ಒಂದೇ ಎಂದು ಎಐಸಿಸಿ ಅಧ್ಯಕ್ಷರು ಹೇಳಿದರೆ, ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಇಬ್ಬರು ದೇಶದ್ರೋಹಿಗಳು ದಕ್ಷಿಣ ಭಾರತ ಪ್ರತ್ಯೇಕ ರಾಷ್ಟವಾಗಬೇಕು ಎಂದು ಕೇಳುತ್ತಿದ್ದಾರೆ. ಇದು ಕಾಂಗ್ರೆಸ್ನ ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಕಿಡಿಕಾರಿದ್ದರು. ಇನ್ನು ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
Dk Suresh says i will visit K. S. Eshwarappa house let him shoot me open challenge, we all know which party killed Gandhi he taunted.
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm