ಬ್ರೇಕಿಂಗ್ ನ್ಯೂಸ್
12-02-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 12: ಡಿಕೆ ಶಿವಕುಮಾರ್ಗೆ ಸೆಟ್ಲುಮೆಂಟ್ ಮಾಡಿ ಮುಗಿಸ್ತೇವೆ ಅಂತ ಈಶ್ವರಪ್ಪ ಕೌಂಟರ್ ಕೊಟ್ಟ ವಿಚಾರ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಿಜೆಪಿ ಅವರಿಗೆ ಮಾನ ಮರ್ಯಾದೆ ಇಲ್ಲ. ಕಳೆದ ಹತ್ತು ವರ್ಷದಲ್ಲಿ 5 ಸಾವಿರದ 233 IT, ED ರೇಡ್ ಆಗಿವೆ. ಕೇವಲ 22 ಮಾತ್ರ ಪ್ರೂವ್ ಆಗಿವೆ. 3 ಸಾವಿರ ಜನ ಕಾಂಗ್ರೆಸ್ ಅವರನ್ನೇ ಟಾರ್ಗೆಟ್ ಮಾಡಿದ್ದಾರೆ. ಈಶ್ವರಪ್ಪ ಅವರ ಅಧಿಕಾರ ಹೋಗಿದೆ. ಅವರು ದೊಡ್ಡವರು. ಅವರು ಬಾಯಿ ಮುಚ್ಚಿಕೊಂಡು ತೆಪ್ಪಗೆ ಇರಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಸಾಹೇಬರು, ಡಿಕೆ ಶಿವಕುಮಾರ್ ಸಾಹೇಬರನ್ನು ಟಚ್ ಕೂಡ ಮಾಡಕ್ಕಾಗಲ್ಲ. ಅಮಿತ್ ಶಾ ಅವರೇ ಹೇಳಿದ್ದಾರೆ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಗೆಲ್ಲಬೇಕು ಅಂತ. ಅವರಿಗೆ ಇಬ್ಬರ ಬಗ್ಗೆ ಎಷ್ಟು ಭಯ ಇದೆ ನೋಡಿ ಎಂದರು.


ಸುಧಾಕರ್ ಮತ್ತೆ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲ ಬಿಡಿ ಸರ್. ಔಟ್ ಡೇಟೆಡ್ ಬಗ್ಗೆ ನಾನ್ ಮಾತಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಸುಧಾಕರ್ನ ಔಟ್ ಡೇಟೆಡ್ ಅಂತ ಪರೋಕ್ಷವಾಗಿ ಹೇಳಿದರು.
ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಇಬ್ಬರು ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನಿಮಾ ಸ್ಟೈಲ್ನಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗುತ್ತೆ. ನೋಡ್ತಾ ಇರಿ, ಇಷ್ಟರಲ್ಲೆ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರು ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲ. ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜೊತೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದ ಈಶ್ವರಪ್ಪ, ರಾಷ್ಟ್ರದ್ರೋಹಿ ಹೇಳಿಕೆಗೆ ಡಿಕೆ ಸುರೇಶ್ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ. ಕ್ರಮ ಕೈಗೊಳ್ಳಿ ಎಂದರೆ ನನಗೆ ನೋಟಿಸ್ ಕಳುಹಿಸುತ್ತಾರೆ. ರಾಷ್ಟ್ರ ದ್ರೋಹಿಗಳನ್ನ ರಕ್ಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.
MLA Pradeep Eshwar Slams Eshwarappa over remarks on DK Shivkumar. Recently eshwarappa made statement saying that they will settle DK ShivKumar case to go to the jail, in contradict to the statement MLA Eshwar said that no one can touch our Boss DK Shivkumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am