ಬ್ರೇಕಿಂಗ್ ನ್ಯೂಸ್
            
                        24-11-20 01:16 pm Bangalore Correspondent ಕರ್ನಾಟಕ
            ಬೆಂಗಳೂರು, ನವೆಂಬರ್ 24 : ಕೆಎಎಸ್ ಅಧಿಕಾರಿ ಡಾ. ಸುಧಾ ಕೇವಲ ಲಂಚ ಪಡೆದು ಅಕ್ರಮ ಆಸ್ತಿ ಗಳಿಸಿಲ್ಲ ! ಬದಲಿಗೆ ಬೆಂಗಳೂರಿನಲ್ಲಿರುವ ಸರ್ಕಾರಿ ಜಮೀನಿಗೆ ಖಾಸಗಿ ವ್ಯಕ್ತಿಗಳನ್ನು ಹುಟ್ಟುಹಾಕಿ ಸರ್ಕಾರದ ಕೋಟ್ಯಂತರ ರೂಪಾಯಿ ಪರಿಹಾರ ಕೊಟ್ಟು ಲೂಟಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಕೇವಲ ಸುಧಾ ಮಾತ್ರವಲ್ಲ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ರಿಯಲ್ ಎಸ್ಟೇಟ್ ಏಜೆಂಟರು ಭಾಗಿಯಾಗಿದ್ದಾರೆ.
ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿದರೆ, ಈ ಭೂಮಿಗೆ ಬಿಡಿಎ ಸ್ವಾಧೀನ ಹೆಸರಿನಲ್ಲಿ ಕೋಟಿ ಕೋಟಿ ಪರಿಹಾರ ನೀಡುವ ನೆಪದಲ್ಲಿ ಕೆಎಎಸ್ ಅಧಿಕಾರಿ ನೂರಾರು ಕೋಟಿ ಲೂಟಿ ಮಾಡಿರುವುದು ಎಸಿಬಿ ತನಿಖೆಯಲ್ಲಿ ಬಯಲಾಗಿದೆ.

ಡಾ. ಸುಧಾ ಅವರ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೊದಲ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳಿಗೆ 200 ದಾಖಲೆಗಳು ಮತ್ತು 50 ಕೋಟಿ ರೂ. ಗೂ ಅಧಿಕ ಆಸ್ತಿ ಬಯಲಿಗೆ ಎಳೆದಿದ್ದರು. ಇದಾದ ಬಳಿಕ ಸುಧಾ ಬೇನಾಮಿ ಏಜೆಂಟ್, ರಿಯಲ್ ಎಸ್ಟೇಟ್ ಉದ್ಯಮಿ ರೇಣುಕಾ ಮನೆ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಸುಧಾ ಅವರ ಚಿನ್ನದ ಸಂಪತ್ತು ಜನರನ್ನು ಬೆಚ್ಚಿ ಬೀಳಿಸಿತ್ತು.
ಸುಧಾ ಅವರ ಅಕ್ರಮ ಆಸ್ತಿಯ ಜಾಡು ಹಿಡಿದು ತನಿಖೆ ನಡೆಸಿದಾಗ ಸರ್ಕಾರಿ ಭೂಮಿಗೆ ಬಬಿಡಿಎ ಪರಿಹಾರ ಕೊಟ್ಟು ನೂರಾರು ಕೋಟಿ ಲೂಟಿ ಮಾಡಿರುವ ದೊಡ್ಡ ಹಗರಣ ಬೆಳಕಿಗೆ ಬಂದಿದೆ.


ಸುಧಾ ಕೇವಲ ಲಂಚ ಪಡೆದು ಅಕ್ರಮ ಆಸ್ತಿ ಗಳಿಸಿಲ್ಲ. ಸರ್ಕಾರಿ ಭೂಮಿಗೆ ಕಂದಾಯ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದೇ ಭೂಮಿಯನ್ನು ಬಿಡಿಎ ಸ್ವಾಧೀನ ಪಡಿಸಿಕೊಂಡು ಕೋಟಿ ಕೋಟಿ ಪರಿಹಾರ ನೀಡಿದೆ. ಇದರಲ್ಲಿ ಸಾಕಷ್ಟು ರಿಯಲ್ ಎಸ್ಟೇಟ್ ಏಜೆಂಟರು ಶಾಮೀಲಾಗಿದ್ದರು. ಕೂಲಿ ಮಾಡುತ್ತಿದ್ದವರು ಬೆಂಜ್ ಕಾರಲ್ಲಿ ಓಡಾಡುತ್ತಿದ್ದಾರೆ. ಸಾಕಷ್ಟು ಏಜೆಂಟರನ್ನು ಈ ಅಕ್ರಮದಲ್ಲಿ ಲಾಭ ಪಡೆದುಕೊಂಡಿದ್ದಾರೆ. ಸರ್ಕಾರಿ ಭೂಮಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ಖಾತೆ, ಪಹಣಿ ಮಾಡಿಸಿ ಆ ಜಮೀನನ್ನುಬಿಡಿಎ ಸ್ವಾಧೀನ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಗೆ ಪರಿಹಾರ ನೀಡಿದೆ. ಇದರ ಸಿಂಹಪಾಲು ಹಣವನ್ನು ಸುಧಾಗೆ ಹೋಗಿದ್ದು, ರೇಣುಕಾ ಅವರ ಮನೆಗೆ ಸೇರಿಸುತ್ತಿದ್ದರು. ಇದರಲ್ಲಿ ಕೇವಲ ಸುಧಾ ಮಾತ್ರವಲ್ಲ, ಬಿಡಿಎ ಮೇಲಾಧಿಕಾರಿಗಳು ಕೂಡ ಶಾಮೀಲಾಗಿರುವುದು ಕಂಡು ಬಂದಿದೆ. ಮುಂದಿನ ದಿನದಗಳಲ್ಲಿ ಕಂದಾಯ ಮತ್ತು ಬಿಡಿಎ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸಿಬಿ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
            
            
            The Anti-Corruption Bureau on Tuesday morning conducted fresh search operations at six locations in connection with a disproportionate asset case against a Karnataka Administrative Service officer in the state.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm