ಬ್ರೇಕಿಂಗ್ ನ್ಯೂಸ್
13-02-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಸಿಬಿಐನಲ್ಲಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್ಐಆರ್ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದ್ದು ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ, ನವೆಂಬರ್ 23, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.
Deputy Chief Minister D.K. Shivakumar is in for a shock. The Lokayukta police have registered an FIR against DK Shivakumar. DK Shivakumar is facing another crisis as the Lokayukta has decided to re-investigate the case in the CBI.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am