ಬ್ರೇಕಿಂಗ್ ನ್ಯೂಸ್
14-02-24 12:14 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಮಾಜಿ ಸಚಿವ ಗೋಪಾಲಯ್ಯಗೆ ಜೀವಬೆದರಿಕೆ ಕರೆ ಬಂದಿದೆ. ರಾಜಧಾನಿ ಬೆಂಗಳೂರಿನ ಬಸವೇಶ್ವರನಗರ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರು ಕರೆ ಮಾಡಿ ಜೀವನ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವರು ಆರೋಪಿಸಿದ್ದಾರೆ.
ನಿನ್ನೆ ರಾತ್ರಿ 11 ರ ಸುಮಾರಿಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜ್, ಹಣಕ್ಕೆ ಬೇಡಿಕೆ ಇಟ್ಟು ಅವಾಚ್ಯವಾಗಿ ನಿಂದಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಶಾಸಕ ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.
ಇಂದು ಬೆಳಗ್ಗೆ ಸದನಕ್ಕೆ ತೆರಳಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸ್ಪೀಕರ್ ಯುಟಿ ಖಾದರ್ ಗೆ ದೂರು ನೀಡಿದ್ದಾರೆ.
ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಪದ್ಮರಾಜ್ ಕರೆ ಮಾಡಿದ್ದ. ಸುಮಾರು 6 ನಿಮಿಷ ಮಾತನಾಡಿ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಅತ್ಯಂತ ಕೆಟ್ಟ ಶಬ್ದಗಳನ್ನು ಬಳಕೆ ಮಾಡಿ ನಿಂಧಿಸಿದ್ದಾನೆ. ಅಲ್ಲದೇ ಹುಡುಗರನ್ನು ಕಳುಹಿಸಿ ನಿನ್ನನ್ನ ಚಿಂದಿ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದಾನೆ. ನನಗೆ ಮಾತ್ರ ಅಲ್ಲ ಈ ಹಿಂದೆಯೂ ಹಲವು ಶಾಸಕರು, ನಾಯಕರು ಸೇರಿದಂತೆ ಗಣ್ಯರಿಗೆ ಬೆದರಿಕೆ ಹಾಕಿದ್ದಾನೆ ಎಂದು ಬಿಜೆಪಿ ಶಾಸಕರ ಆರೂಪಿಸಿದ್ದಾರೆ.
ಕರೆ ಮಾಡಿ ಜೀವ ಬೆದರಿಕೆ ಹಾಕಿದ ಬೆನ್ನಲ್ಲೇ ನಾನು ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೀನಿ, ತಡರಾತ್ರಿಯೇ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದೇನೆ. ನಾನು ಅವನಿಗೆ ಸಾಕಷ್ಟು ಬಾರಿ ಮಾನವೀಯತೆ ಮೇರೆಗೆ ಹಲವು ಬಾರಿ ಸಹಾಯ ಮಾಡಿದ್ದೀನಿ. ಪದ್ಮರಾಜ್ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿದ್ದೀನಿ. ನಂತರ ಆಕೆಗೆ ESI ಆಸ್ಪತ್ರೆಯಲ್ಲಿ ಕೆಲಸವನ್ನು ಕೊಡಿಸಿದ್ದೇನೆ. ಇಷ್ಟೆಲ್ಲ ಮಾಡಿದರೂ ತಡರಾತ್ರಿ ಕಾಲ್ ಮಾಡಿ ಧಮ್ಕಿ ಹಾಕಿದ್ದಾನೆ. ಕೇಳಿದಷ್ಟು ದುಡ್ಡು ಕೊಡು ಇಲ್ಲಾ ಮುಗಿಸ್ತೀನೆಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನನ್ನ ಹಾಗೂ ಪದ್ಮರಾಜ್ ನಡುವೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ, ಈ ಹಿಂದೆಯೂ ಪದ್ಮರಾಜ್ ಇದೇ ರೀತಿ ಮಾಡಿದ್ದ ಎಂದು ಆರೋಪಿಸಿದ್ದಾರೆ.
BJP MLA Gopaliah gets threat from corporater Padmaraj in Bangalore. A complaint even to Speaker UT Khader has been made by Gopaliah.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm