ಬ್ರೇಕಿಂಗ್ ನ್ಯೂಸ್
15-02-24 09:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರ ವಿರುದ್ಧ ಕ್ರಮ ಜರುಗಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ. ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ. ಬಳೆ ತೊಡುವುದರಲ್ಲಿ ಪಾವಿತ್ರ್ಯತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು.
ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಗೃಹ ಸಚಿವರು ಹೇಳುವಂತೆ, ದೂರು ಬಂದಿರುವುದರಿಂದ ಎಫ್ಐಆರ್ ದಾಖಲಾಗಿದೆ. ಇದಕ್ಕೂ ಎರಡು-ಮೂರು ದಿನಗಳ ಮುನ್ನವೇ ಪೋಷಕರು ದೂರು ನೀಡಿದ್ದರೂ ಅದು ದಾಖಲಾಗಿಲ್ಲ. ಆ ದೂರಿನ ಬಗ್ಗೆ ಪೊಲೀಸರು ಕ್ಯಾರೇ ಎನ್ನಲಿಲ್ಲ. ಕೋಮುಗಲಭೆ, ಪ್ರಧಾನಿಯವರನ್ನು ಹೀಯಾಳಿಸಿರುವುದಕ್ಕೆ ಯಾವುದೇ ಸೆಕ್ಷನ್ ದಾಖಲಿಸಿಲ್ಲ. ಆ ದೂರು ಬಾಕಿ ಇಟ್ಟು, ಒತ್ತಡದಿಂದ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕರ್ನಾಟಕ ಪೊಲೀಸರ ಗೂಂಡಾಗಿರಿ ಹಾಗೂ ದೌರ್ಜನ್ಯದ ರಾಜ್ಯವಾಗಿದೆ. ನಾನು ಹುಬ್ಬಳ್ಳಿಗೆ ಹೋದಾಗಲೂ ಅವಾಚ್ಯ ಪದ ಬಳಸಿದ್ದೇನೆಂದು ಪ್ರಕರಣ ದಾಖಲಾಗಿದೆ. ಹಿಂದೂಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸದನದಲ್ಲಿ ಖಂಡಿಸಲಾಗಿದೆ. ಕೂಡಲೇ ಸಿಸ್ಟರ್ ಪ್ರಭ ಅವರ ಮೇಲೆ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Action should be taken against Sister Prabha of Jerosa School in Mangaluru for allegedly making derogatory remarks against Hindu culture.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm