ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm