ಬ್ರೇಕಿಂಗ್ ನ್ಯೂಸ್
20-02-24 12:53 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಸ್ಯಾಂಡಲ್ವುಟ್ ನಟ ಧ್ರುವ ಸರ್ಜಾ ಸೇರಿದಂತೆ 'ಮಾರ್ಟಿನ್' ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳಿದ್ದ ಚಿತ್ರ ತಂಡದ ಸದಸ್ಯರು ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಿಮಾನ ಶ್ರೀನಗರ ನಿಲ್ದಾಣದಲ್ಲಿ ಇಳಿಯಲು ಪರದಾಡಿದ್ದು ಅಪಘಾತದ ಅನುಭವಕ್ಕೊಳಗಾಗಿ ಪ್ರಯಾಣಿಕರು ಒಂದು ಕ್ಷಣ ಗಾಬರಿ ಬಿದ್ದ ಘಟನೆ ನಡೆದಿದೆ.
ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್ ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರಕ್ಕೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಕಂಡುಬಂದಿದೆ. ಕೆಟ್ಟ ಹವಾಮಾನದಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡೋದಕ್ಕೆ ಸಾಧ್ಯವಾಗದೇ ಪೈಲಟ್ ಪರದಾಟ ನಡೆಸಿದ್ದಾರೆ.


ಚಿತ್ರತಂಡದ ಸದಸ್ಯರು ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಭಯಕ್ಕೀಡಾಗಿದ್ದಾರೆ. ಕುಳಿತ ಸೀಟ್ ನಡುಗಿದ ಅನುಭವವಾಗಿದ್ದು ಕುಳಿತಿದ್ದ ಸ್ಥಳದಿಂದಲೇ ಪ್ರಯಾಣಿಕರು ದೇವರಿಗೆ ಕೈಮುಗಿದಿದ್ದಾರೆ. ಭಯಕ್ಕೀಡಾಗಿ ಕಣ್ಣೀರಿಟ್ಟಿದ್ದಾರೆ. ಕೊನೆಗೆ ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೂಡಲೇ ಪ್ರಯಾಣಕರು ಗಾಬರಿಯಿಂದ ಹೊರಬಂದಿದ್ದು ಜೀವ ಉಳಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಅಪಾಯದಿಂದ ಪಾರಾದ ನಟ ಧ್ರುವ ಸರ್ಜಾ ತನಗಾದ ಅನುಭವದ ಬಗ್ಗೆ ವಿಡಿಯೋ ಮಾಡಿದ್ದು, " ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವಕ್ಕೀಡಾದೆ. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ " ಎಂದಿದ್ದಾರೆ. ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ತಂಡದಲ್ಲಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಖುಷಿಯಲ್ಲಿ ಎಲ್ಲರೂ ಜೈ ಆಂಜನೇಯ, ಜೈ ಶ್ರೀರಾಮ್ ಎಂದಿದ್ದಾರೆ.
Kannada Actor Dhruva Sarja And Martin Film Crew Narrowly Escaped The Plane Crash In Srinagar.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm