ಬ್ರೇಕಿಂಗ್ ನ್ಯೂಸ್
20-02-24 07:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದರೂ ಪ್ರಧಾನಿ ಸ್ಥಾನಕ್ಕೆ ಅರ್ಧದಲ್ಲಿ ರಾಜೀನಾಮೆ ಕೊಡಲಿದ್ದಾರೆ. ಯಾಕೆಂದರೆ ಅವರಿಗೆ ಗಂಡಾಂತರ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ಹೇಳಿದ್ದಾರೆ.
ಒನ್ ಇಂಡಿಯಾ ಸಂಸ್ಥೆ ನಡೆಸಿರುವ ಸಂದರ್ಶನದಲ್ಲಿ ಅವರು ಮಾತುಗಳನ್ನು ಹೇಳಿದ್ದಾರೆ.

ಹನ್ನೆರೆಡು ವರ್ಷ ಮಾತ್ರ ಮೋದಿ ಅವರಿಗೆ ಶುಭ ಯೋಗವಿದೆ. ಹೀಗಾಗಿ ನರೇಂದ್ರ ಮೋದಿ ಮುಂಬರುವ ಎಲೆಕ್ಷನಲ್ಲಿಯೂ ಗೆಲ್ತಾರೆ. ಮೋದಿ ಕೆಳಗಡೆ ಒಂದಿಷ್ಟು ಜನ ಲಂಚ ತಿನ್ನದ ಜನ ಇದ್ದರು. ಕ್ಲೀನ್ ಹ್ಯಾಂಡ್ಗಳು ಇದ್ದವು. ಆದರೆ ಇತ್ತೀಚೆಗೆ ಅವರೇ ಭ್ರಷ್ಟಾಚಾರ ಮಾಡಿಕೊಂಡು ಬರುತ್ತಿದ್ದಾರೆ. ಯಾಕೆ ಹೀಗೆ ಮಾಡ್ತಾಯಿದ್ದಾರೆ ಅಂದರೆ, ಒಬ್ಬ ರಾಜನನ್ನು ಹಾಳ ಮಾಡಬೇಕು ಅಂತ ಹಲವಾರು ಜನ ಕಾಯುತ್ತಿರುತ್ತಾರೆ. ಅದು ವಿರೋಧ ಪಕ್ಷದವರೇ ಆಗಬೇಕು ಅಂತಿಲ್ಲ. ರಾಜನನ್ನು ಒಬ್ಬ ಮಂತ್ರಿ, ಸೈನಿಕ ಕೂಡ ಹಾಳು ಮಾಡಬಹುದು. ಇವರು ಮಾಡೋ ಕೆಟ್ಟ ಕೆಲಸಗಳಿಂದ ಮೋದಿಗೆ ಕೆಟ್ಟ ಹೆಸರು ಬರಬಹುದು. ಇಂಥಹ ಬಹಳಷ್ಟು ಗಂಡಾಂತರಗಳು ಮೋದಿಗೆ ಇವೆ.

ಮೋದಿ ಕಾಂಗ್ರೆಸ್ ಸೇರಿದರೂ ಮೋದಿನೇ ಗೆಲ್ಲೋದು !
ನರೇಂದ್ರ ಮೋದಿ ವರ್ಚಸ್ಸು ಎಷ್ಟಿದೆ ಅಂದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೇರಿದರೂ ಮೋದಿನೇ ಗೆಲ್ಲುತ್ತಾರೆ. ಎಲ್ಲಾ ಕಾಂಗ್ರೆಸ್ ನವರು ನರೇಂದ್ರ ಮೋದಿ ಬಳಿಯೇ ಬರುತ್ತಾರೆ. ಹೊರಗಡೆಯಿಂದ ಸಪೋರ್ಟ್ ಮಾಡುವವರು ತುಂಬ ಜನ ಇದ್ದಾರೆ. ಉದಾಹರಣೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮೋದಿಗೆ ಸಪೋರ್ಟ್ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ನವರು ದೆಹಲಿಯಲ್ಲಿ ಸಾವಿರಾರು ಜನ ಸೇರಿಕೊಂಡರೂ ನರೇಂದ್ರ ಮೋದಿ ಅವರನ್ನ ಏನು ಮಾಡಕ್ಕೂ ಆಗಲ್ಲ. ಯಾಕೆಂದರೆ ಅವರ ಯೋಗ ಇನ್ನೂ ಚೆನ್ನಾಗಿದೆ.
ಹನ್ನೆರಡು ವರ್ಷ ಮಾತ್ರ ಮೋದಿಗೆ ಶುಭ ಯೋಗವಿದೆ. ಒಂದು ವೇಳೆ ಅವರು ವೈರಾಗ್ಯ ಬಂದು ರಾಜೀನಾಮೆ ನೀಡದೇ ಇದ್ದಲ್ಲಿ ಗಂಡಾಂತರ ಎದುರಾಗಲಿದೆ. ಅಂದರೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಥರ ಮೋದಿ ಅವರಿಗೆ ಏನಾದರೂ ಮಾಡಬಹುದು. ಅವರ ಜನರೇ ಅವರಿಗೆ ಕುತಂತ್ರದಿಂದ ಏನಾದ್ರು ಮಾಡಬಹುದು.
ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಬಗ್ಗೆ ರಾಜ್ಯದಲ್ಲಿ ಮಾತ್ರ ವಿರೋಧ ಅಷ್ಟೇ. ದೆಹಲಿ ಹೋದ್ರೆ ಆಲ್ ಪಾರ್ಟಿ ಮೀಟಿಂಗ್ ಅಲ್ಲಿ ಅವರೂ ಬಾಯಿ ಮುಚ್ಚಿಕೊಂಡು ಕುಳಿತಿರುತ್ತಾರೆ. ಯಾಕೆಂದರೆ ಮೋದಿ ಹೇಗೆ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತು. ಮೋದಿಯವರು ಬೇರೆ ಪಕ್ಷಕ್ಕೆ ಅಧಿಕಾರ ಬಿಟ್ಟು ಕೊಡುವುದಿಲ್ಲ. ಯೋಗಿ ಆದಿತ್ಯನಾಥ್ ಅವರನ್ನೇ ಮುಂದಿನ ಪಿಎಂ ಮಾಡಬಹುದು ಎಂದು ಬ್ರಹ್ಮಾಂಡ ಗುರೂಜಿ ಕುತೂಹಲದ ಭವಿಷ್ಯ ನುಡಿದಿದ್ದಾರೆ.
Brahmanda Guruji predicts about modi, says he will resign in just two years of becoming prime Minister again. says he will become Prime Minister again but within 2 years of time will resign the post of prime minister added in a interview made by oneIndia
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm