ಬ್ರೇಕಿಂಗ್ ನ್ಯೂಸ್
20-02-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರಕಾರ ಅನುದಾನ ತಾರತಮ್ಯ ಮಾಡ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಕೊಡುತ್ತಿದ್ದಾಗ, ಎದ್ದು ನಿಂತು ವಿರೋಧಿಸಿದ್ದಕ್ಕೆ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರನ್ನು ಕಾಂಗ್ರೆಸ್ ಶಾಸಕರು ಹುಚ್ಚ ಎಂದು ರೇಗಿಸಿದ ಘಟನೆ ನಡೆದಿದೆ.
ಫುಡ್ ಕಾರ್ಪೊರೇಶನ್ ಕಡೆಯಿಂದ ನಾವು ಅಕ್ಕಿ ಕೇಳಿದ್ದೆವು. ಅದರ ಮ್ಯಾನೇಜರ್ ಓಕೆಯೆಂದು ಹೇಳಿದ್ದೂ ಆಗಿತ್ತು. ಆದರೆ ಕೇಂದ್ರ ಸರಕಾರದವರು ರಾಜಕೀಯ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದಾಗ, ವಿರೋಧಿಸಿದ ವಿಪಕ್ಷ ನಾಯಕ ಅಶೋಕ್, ನೀವು ಗ್ಯಾರಂಟಿ ಘೋಷಣೆ ಮಾಡಿದಾಗ ಕೇಂದ್ರವನ್ನು ಕೇಳಿದ್ರಾ.. ಆನಂತರ ಕೇಂದ್ರ ಅಕ್ಕಿ ಕೊಡಲಿಲ್ಲ ಎಂದರೆ ಹೇಗೆ. ಅಕ್ಕಿಯನ್ನು ಮ್ಯಾನೇಜರ್ ಕೊಡೋದಾ ಎಂದು ಛೇಡಿಸಿದರು.


ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ಆಹಾರ ಭದ್ರತಾ ನಿಗಮ ಅನ್ನೋದು ಸ್ವತಂತ್ರ ಸಂಸ್ಥೆ ಎಂದು ಹೇಳಲು ಹೊರಟಾಗ ಎದ್ದು ನಿಂತ ವೇದವ್ಯಾಸ ಕಾಮತ್, ಸ್ವತಂತ್ರ ಸಂಸ್ಥೆಯಲ್ಲ. ಕೇಂದ್ರಕ್ಕೆ ಅಧಿಕಾರ ಇದೆಯೆಂದು ಹೇಳಲು ಹೊರಟರು. ಕಾಂಗ್ರೆಸ್ ಶಾಸಕರು ಅದಕ್ಕೆ ವಿರೋಧಿಸಿ ಗದ್ದಲ ಎಬ್ಬಿಸಿದ್ದಾರೆ. ಏಯ್ ಹುಚ್ಚಾ ಅವನು. ಹೊರಗೆ ಹಾಕಿ ಎಂದು ಕೂಗಿದ್ದಾರೆ. ಇದರಿಂದ ಕುಪಿತರಾದ ವೇದವ್ಯಾಸ್ ಅವರನ್ನು ಖಾದರ್ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹುಚ್ಚ ನೀವು ಎಂದು ವೇದವ್ಯಾಸ್ ಹೇಳಿದ್ದಕ್ಕೆ ಖಾದರ್ ಗರಂ ಆಗಿದ್ದು ನೀವೊಮ್ಮೆ ಕೂತ್ಕೊಳ್ಳಿ ಮಾರ್ರೆ, ಸರಿಯಾಗಿ ತಿಳಿದುಕೊಳ್ಳದೆ ಮಾತಾಡಬೇಡಿ ಎಂದಿದ್ದಾರೆ.
ಇದನ್ನು ಕೇಳಿದ ಆಡಳಿತ ಪಕ್ಷದ ಸದಸ್ಯರು, ವೇದವ್ಯಾಸ ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಡಬೇಕಲ್ಲ. ಹುಚ್ಚ ಅಂತಾನೆ, ಅವನನ್ನು ಎತ್ತಿ ಹೊರಗೆ ಹಾಕ್ರೀ ಎಂದು ಗದ್ದಲ ಎಬ್ಬಿಸಿದ್ದಾರೆ. ಮುಖ್ಯಮಂತ್ರಿ ಮಾತಾಡೋವಾಗ ನಡುವೆ ಬಾಯಿ ಹಾಕ್ತಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹುಚ್ಚ ಅವನು ಎಂದು ಹೇಳಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
MLA Vedavyas Kamath is mad, put him out, congress leaders assembly video goes viral. Congress leaders call him fool openly in the assembly
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm