ಬ್ರೇಕಿಂಗ್ ನ್ಯೂಸ್
20-02-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರಕಾರ ಅನುದಾನ ತಾರತಮ್ಯ ಮಾಡ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಕೊಡುತ್ತಿದ್ದಾಗ, ಎದ್ದು ನಿಂತು ವಿರೋಧಿಸಿದ್ದಕ್ಕೆ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರನ್ನು ಕಾಂಗ್ರೆಸ್ ಶಾಸಕರು ಹುಚ್ಚ ಎಂದು ರೇಗಿಸಿದ ಘಟನೆ ನಡೆದಿದೆ.
ಫುಡ್ ಕಾರ್ಪೊರೇಶನ್ ಕಡೆಯಿಂದ ನಾವು ಅಕ್ಕಿ ಕೇಳಿದ್ದೆವು. ಅದರ ಮ್ಯಾನೇಜರ್ ಓಕೆಯೆಂದು ಹೇಳಿದ್ದೂ ಆಗಿತ್ತು. ಆದರೆ ಕೇಂದ್ರ ಸರಕಾರದವರು ರಾಜಕೀಯ ಕಾರಣಕ್ಕೆ ರಾಜ್ಯಕ್ಕೆ ಅಕ್ಕಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದಾಗ, ವಿರೋಧಿಸಿದ ವಿಪಕ್ಷ ನಾಯಕ ಅಶೋಕ್, ನೀವು ಗ್ಯಾರಂಟಿ ಘೋಷಣೆ ಮಾಡಿದಾಗ ಕೇಂದ್ರವನ್ನು ಕೇಳಿದ್ರಾ.. ಆನಂತರ ಕೇಂದ್ರ ಅಕ್ಕಿ ಕೊಡಲಿಲ್ಲ ಎಂದರೆ ಹೇಗೆ. ಅಕ್ಕಿಯನ್ನು ಮ್ಯಾನೇಜರ್ ಕೊಡೋದಾ ಎಂದು ಛೇಡಿಸಿದರು.


ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ಆಹಾರ ಭದ್ರತಾ ನಿಗಮ ಅನ್ನೋದು ಸ್ವತಂತ್ರ ಸಂಸ್ಥೆ ಎಂದು ಹೇಳಲು ಹೊರಟಾಗ ಎದ್ದು ನಿಂತ ವೇದವ್ಯಾಸ ಕಾಮತ್, ಸ್ವತಂತ್ರ ಸಂಸ್ಥೆಯಲ್ಲ. ಕೇಂದ್ರಕ್ಕೆ ಅಧಿಕಾರ ಇದೆಯೆಂದು ಹೇಳಲು ಹೊರಟರು. ಕಾಂಗ್ರೆಸ್ ಶಾಸಕರು ಅದಕ್ಕೆ ವಿರೋಧಿಸಿ ಗದ್ದಲ ಎಬ್ಬಿಸಿದ್ದಾರೆ. ಏಯ್ ಹುಚ್ಚಾ ಅವನು. ಹೊರಗೆ ಹಾಕಿ ಎಂದು ಕೂಗಿದ್ದಾರೆ. ಇದರಿಂದ ಕುಪಿತರಾದ ವೇದವ್ಯಾಸ್ ಅವರನ್ನು ಖಾದರ್ ಕುಳಿತುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹುಚ್ಚ ನೀವು ಎಂದು ವೇದವ್ಯಾಸ್ ಹೇಳಿದ್ದಕ್ಕೆ ಖಾದರ್ ಗರಂ ಆಗಿದ್ದು ನೀವೊಮ್ಮೆ ಕೂತ್ಕೊಳ್ಳಿ ಮಾರ್ರೆ, ಸರಿಯಾಗಿ ತಿಳಿದುಕೊಳ್ಳದೆ ಮಾತಾಡಬೇಡಿ ಎಂದಿದ್ದಾರೆ.
ಇದನ್ನು ಕೇಳಿದ ಆಡಳಿತ ಪಕ್ಷದ ಸದಸ್ಯರು, ವೇದವ್ಯಾಸ ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಪೀಠಕ್ಕೆ ಗೌರವ ಕೊಡಬೇಕಲ್ಲ. ಹುಚ್ಚ ಅಂತಾನೆ, ಅವನನ್ನು ಎತ್ತಿ ಹೊರಗೆ ಹಾಕ್ರೀ ಎಂದು ಗದ್ದಲ ಎಬ್ಬಿಸಿದ್ದಾರೆ. ಮುಖ್ಯಮಂತ್ರಿ ಮಾತಾಡೋವಾಗ ನಡುವೆ ಬಾಯಿ ಹಾಕ್ತಾನೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಹುಚ್ಚ ಅವನು ಎಂದು ಹೇಳಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
MLA Vedavyas Kamath is mad, put him out, congress leaders assembly video goes viral. Congress leaders call him fool openly in the assembly
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am