ಬ್ರೇಕಿಂಗ್ ನ್ಯೂಸ್
21-02-24 12:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ ಎಂದಿದ್ದ ಕುವೆಂಪು ವಾಣಿಯನ್ನು ಬದಲಿಸಿ ಎಡವಟ್ಟು ಮಾಡಿಕೊಂಡಿದ್ದ ರಾಜ್ಯ ಸರ್ಕಾರ ಆಕ್ರೋಶ ಭುಗಿಲೇಳುತ್ತಿದ್ದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಂದಾಗಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಕುವೆಂಪು ರಚಿತ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಡಿಸಿ ಮತ್ತೊಂದು ವಿವಾದ ಎಳ್ಕೊಂಡಿದೆ.
ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆದೇಶ ಹೊರಡಿಸಿದೆ.
ಈ ಹಿಂದೆ ಖಾಸಗಿ, ಸರ್ಕಾರಿ ಸೇರಿ ಎಲ್ಲಾ ಮಾದರಿಯ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ, ಫೆ.19ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಹಾಕಿರುವ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದ್ದ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಎಂದಷ್ಟೇ ಉಲ್ಲೇಖಿಸಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆಮೂಲಕ ಖಾಸಗಿ ಶಾಲೆಗಳಲ್ಲಿ ರಾಜ್ಯದಲ್ಲಿ ಅಧಿಕೃತ ಎಂದು ಗುರುತಿಸಲ್ಪಟ್ಟ ನಾಡಗೀತೆಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ರೀತಿ ನಡೆದುಕೊಂಡಿದೆ.
The State Government has decided to maintain status quo in residential schools by changing the voice of Kuvempu, who had said that this is a temple of knowledge and come in with folded hands. Now, another controversy has erupted after the government issued an official circular stating that it is no longer mandatory for private schools to sing the national anthem composed by Kuvempu.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am