ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm