ಬ್ರೇಕಿಂಗ್ ನ್ಯೂಸ್
21-02-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ಬಿಟ್ ಕಾಯಿನ್ ಹಗರಣವನ್ನು ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಕೆದಕಲು ಆರಂಭಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಬುಧವಾರ ಮಧ್ಯಾಹ್ನ ವಿಚಾರಣೆಗೆ ಬರುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಸಿಐಡಿ ಕಚೇರಿಗೆ ಹಾಜರಾದ ಸಂದೀಪ್ ಪಾಟೀಲ್, ಪ್ರಕರಣ ಸಂಬಂಧ ಕೆಲವು ಮಾಹಿತಿಗಳನ್ನು ಒದಗಿಸಿ ವಾಪಸಾಗಿದ್ದಾರೆ. ಸಂದೀಪ್ ಪಾಟೀಲ್ 2019- 20 ರಲ್ಲಿ ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಆಯುಕ್ತರಾಗಿದ್ದಾಗಲೇ ಬಿಟ್ ಕಾಯಿನ್ ಕೇಸ್ ಹೊರಬಂದಿತ್ತು. ಬಳಿಕ ಒಟ್ಟು ಪ್ರಕರಣವನ್ನು ಅಂದಿನ ಸಿಸಿಬಿ ಪೊಲೀಸರು ಮುಚ್ಚಿ ಹಾಕಿದ್ದಾರೆಂದು ಆರೋಪ ಕೇಳಿಬಂದಿತ್ತು. ಬಿಜೆಪಿ ಸರ್ಕಾರದ ಪ್ರಭಾವಿ ರಾಜಕಾರಣಿಗಳು ಹಗರಣದಲ್ಲಿ ಶಾಮೀಲಾಗಿದ್ದರಲ್ಲದೆ, ಪ್ರಮುಖ ಆರೋಪಿ ಶ್ರೀಕಿಯನ್ನು ಬಳಸಿ ಸರ್ಕಾರದ ಬೊಕ್ಕಸಕ್ಕೇ ಕೈಹಾಕಿದ್ದರು. ಹಲವು ವೆಬ್ ಸೈಟ್, ಅಮೆರಿಕದ ಬಿಟ್ ಕಾಯಿನ್ ಸಂಸ್ಥೆಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಗಳನ್ನು ಕಳವು ಮಾಡಲಾಗಿತ್ತು.
ಕಾಂಗ್ರೆಸ್ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎಸ್ಐಟಿ ತಂಡವನ್ನು ನೇಮಕ ಮಾಡಿತ್ತು. ಇತ್ತೀಚೆಗೆ ಆಗಿನ ಸಿಸಿಬಿ ತಂಡದ ಇಬ್ಬರು ಇನ್ಸ್ ಪೆಕ್ಟರ್ ಗಳನ್ನು ಬಂಧಿಸಿದ್ದ ತಂಡ ಇದೀಗ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆ ನಡೆಸಿದೆ. ಅಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದರು. ಅಲ್ಲದೆ, ಸಿಸಿವಿ ತಂಡದ ಪ್ರಮುಖ ಅಧಿಕಾರಿಗಳೇ ಸಾಕ್ಷ್ಯ ನಾಶಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ವಿಚಾರಣೆಗೆ ಕರೆಸಿದ್ದರಿಂದ ಮುಂದಿನ ಹಂತದಲ್ಲಿ ರಾಜಕಾರಣಿಗಳನ್ನೂ ತನಿಖೆಗೆ ಕರೆಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಯೊಬ್ಬರ ಹೆಸರೂ ಬಿಟ್ ಕಾಯಿನ್ ಹಗರಣದಲ್ಲಿ ಕೇಳಿಬಂದಿತ್ತು.
The Congress government has started raking up the bitcoin scam ahead of the Lok Sabha elections. Senior IPS officer Sandeep Patil has been questioned by the SIT probing the case.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am