ಬ್ರೇಕಿಂಗ್ ನ್ಯೂಸ್
23-02-24 10:45 pm HK News Desk ಕರ್ನಾಟಕ
ಬೆಳಗಾವಿ, ಫೆ 23: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಗೋಕಾಕ ಆಸ್ಪತ್ರೆಗೆ ದಾಖಲಿಸಿತಾಯಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಿಂದ ಮುಗಳಖೋಡಕ್ಕೆ ಹೊರಟ್ಟಿದ ಸ್ವಿಫ್ಟ್ ಕಾರು ಹಾಗೂ ಮುಗಳಖೋಡದಿಂದ ಗುರ್ಲಾಪೂರ ಕಡೆಗೆ ಬರುತ್ತಿದ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಗುರ್ಲಾಪೂರ ಗ್ರಾಮದ ಒಂದೇ ಕುಟುಂಬದ ಲಕ್ಷ್ಮಿ ಮರಾಠೆ (19), ಮಲ್ಲಿಕಾರ್ಜುನ ಮರಾಠೆ (16), ಆಕಾಶ್ ಮರಾಠೆ (14) ಹಾಗೂ ಸಂಬಂಧಿಕರಾದ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮದ ಏಕನಾಥ ಪಡತರಿ (22) ಮತ್ತು ಬೈಕ್ ಮೇಲಿದ್ದ ಮೂಡಲಗಿ ತಾಲೂಕಿನ ದುರದುಂಡಿ ಗ್ರಾಮದ ಹನುಮಂತ ಮಾಳ್ಯಾಗೋಳ (42), ಇನ್ನೊಂದು ಬೈಕ್ ಮೇಲಿದ್ದ ರಾಯಬಾಗ ತಾಲೂಕಿನ ಮುಗುಳಖೋಡದ ನಾಗಪ್ಪ ಯಡವನ್ನವರ (48) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಎಸ್ಪಿ ರಾಮಗೊಂಡ ಬಸರಗಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಹಾರೋಗೇರಿ ಸಿಪಿಐ ರವಿಚಂದ್ರನ್ ಬಡಪಕಿರಪ್ಪನವರ, ಅಥಣಿ ಸಿಪಿಐ ರವೀಂದ್ರ ನಾಯಕವಾಡಿ, ಹಾರೂಗೇರಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಗಳು ಆಗಮಿಸಿದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಬಳಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಹಿತ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ನಡೆದಿದೆ.
Belagavi another accident 6 killed after car rams two bikes. On Thursday Swift car rammed divider after which 6 people were killed and today on Friday another accident as occurred in belagavi killing 6 people.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm