ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm