ಬ್ರೇಕಿಂಗ್ ನ್ಯೂಸ್
            
                        25-11-20 07:02 pm Bengaluru Correspondent ಕರ್ನಾಟಕ
            ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.

ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ.  ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
            
            
            Two and half years I will be the cm of Karnataka stated BS Yediyurapp in Mysore
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm