ಬ್ರೇಕಿಂಗ್ ನ್ಯೂಸ್
27-02-24 01:14 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.27: ಕರ್ನಾಟಕ ಸಿವಿಲ್ ಜಡ್ಜ್ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ರಾಜ್ಯದ ವಿವಿಧೆಡೆಯ 33 ಮಂದಿ ಜಡ್ಜ್ ಹುದ್ದೆಗೆ ನೇಮಕ ಆಗಿರುವ ಬಗ್ಗೆ ಫೆ.23ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆ ಪೈಕಿ ಮಂಗಳೂರಿನ ಅನಿಲ್ ಜಾನ್ ಸಿಕ್ವೇರಾ 25ರ ಹರೆಯದಲ್ಲಿ ಜಡ್ಜ್ ಹುದ್ದೆಗೇರಿದ ಕರ್ನಾಟಕದ ಅತಿ ಕಿರಿಯ ವ್ಯಕ್ತಿಯೆಂದು ಹೆಗ್ಗಳಿಕೆ ತೋರಲಾಗಿತ್ತು. ಆದರೆ, ಅದೇ ಪಟ್ಟಿಯಲ್ಲಿರುವ ಬೆಂಗಳೂರಿನ ನಮ್ರತಾ ಎಸ್. ಹೊಸ್ಮಠ್ ಎಂಬ ಯುವತಿ 24 ವರ್ಷದಲ್ಲೇ ಜಡ್ಜ್ ಪರೀಕ್ಷೆ ಪಾಸ್ ಮಾಡಿದ್ದು, ರಾಜ್ಯದ ಅತಿ ಕಿರಿಯ ಜಡ್ಜ್ ಎಂಬ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.
ಶ್ರೀರಾಮಪುರದ ನಿವಾಸಿ ವಕೀಲ ಸ್ವಾಮಿ ಶಿವಪ್ರಕಾಶ್ ಅವರ ಪುತ್ರಿಯಾಗಿರುವ ನಮ್ರತಾ ಅವರು ಮಲ್ಲೇಶ್ವರಂನಲ್ಲಿ ವಿದ್ಯಾಮಂದಿರ ಎಜುಕೇಶನ್ ಸೊಸೈಟಿಯಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ಶಿಕ್ಷಣ ಪೂರೈಸಿದ್ದರು. ಪಿಯುಸಿಯಲ್ಲಿ ಸೈನ್ಸ್ ಓದಿದ್ದ ಅವರು, ಬಳಿಕ ಬೆಂಗಳೂರು ಯುನಿವರ್ಸಿಟಿಯ ಕಾನೂನು ಕಾಲೇಜಿನಲ್ಲಿ 2022ನೇ ವರ್ಷದಲ್ಲಿ ಬಿಎ –ಎಲ್ಎಲ್ ಬಿ ಪೂರೈಸಿದ್ದರು. ಸದ್ಯ ಕರ್ನಾಟಕ ಹೈಕೋರ್ಟಿನಲ್ಲಿ ಜಡ್ಜ್ ಡಾ.ಪ್ರಭಾಕರ ಶಾಸ್ತ್ರೀ ಅವರಲ್ಲಿ ಲಾ ಕ್ಲರ್ಕ್ ಮತ್ತು ರೀಸರ್ಚ್ ಅಸಿಸ್ಟೆಂಟ್ ಆಗಿದ್ದಾರೆ. 24 ವರ್ಷ ಎಂಟು ತಿಂಗಳ ಹರೆಯದಲ್ಲಿರುವ ನಮ್ರತಾ ತನ್ನ ಮೊದಲ ಪ್ರಯತ್ನದಲ್ಲಿಯೇ ಜಡ್ಜ್ ಹುದ್ದೆಯ ಪರೀಕ್ಷೆಯನ್ನು ಪಾಸ್ ಮಾಡಿದ್ದು ಅತಿ ಕಿರಿಯ ಜಡ್ಜ್ ಎಂಬ ಶ್ರೇಯಸ್ಸು ತನಗೆ ಸೇರಬೇಕೆಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಅನಿಲ್ ಜಾನ್ ಸಿಕ್ವೇರಾ 25 ವರ್ಷ ಪೂರೈಸಿದ್ದು, ಜಡ್ಜ್ ಹುದ್ದೆಗೇರಿದ ರಾಜ್ಯದ ಅತಿ ಕಿರಿಯ ವ್ಯಕ್ತಿಯೆಂದು ಈ ಮೊದಲು ಹೇಳಲಾಗಿತ್ತು. ನಮ್ರತಾ ಮತ್ತು ಅನಿಲ್ ಸಿಕ್ವೇರಾ ಅವರು ಬೆಂಗಳೂರಿನಲ್ಲಿ ಒಂದೇ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದರು. ಅನಿಲ್ ಸಿಕ್ವೇರಾ ಎರಡನೇ ಪ್ರಯತ್ನದಲ್ಲಿ ಪರೀಕ್ಷೆ ಪಾಸ್ ಮಾಡಿದ್ದರೆ, ನಮ್ರತಾ ಮೊದಲ ಪ್ರಯತ್ನದಲ್ಲಿಯೇ ಸಾಧನೆ ಮಾಡಿದ್ದಲ್ಲದೆ, ರಾಜ್ಯದ ಅತಿ ಕಿರಿಯ ಮಹಿಳಾ ಜಡ್ಜ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
2023ರ ನವೆಂಬರ್ ತಿಂಗಳಲ್ಲಿ ನಡೆದ ಲಿಖಿತ ಪರೀಕ್ಷೆಯಲ್ಲಿ 33 ಮಂದಿ ತೇರ್ಗಡೆಯಾಗಿರುವ ಬಗ್ಗೆ ಫೆ.23ರಂದು ಹೈಕೋರ್ಟ್ ರಿಜಿಸ್ಟ್ರಾರ್ ಅಧಿಸೂಚನೆ ಪ್ರಕಟಿಸಿದ್ದರು. ಅವರು ಪಡೆದ ಅಂಕದ ಆಧಾರದಲ್ಲಿ ಒಂದರಿಂದ 33ರ ಕ್ರಮಾಂಕದಲ್ಲಿ ಜಡ್ಜ್ ಹುದ್ದೆಗೆ ಆಯ್ಕೆಗೆ ಲಿಸ್ಟ್ ಮಾಡಲಾಗಿತ್ತು. ಅದರ ಪ್ರಕಾರ, ಹರ್ಷಿತಾ ಜಿಎಂ(1), ಝಹೀರಾ ಅತಾನೂರ್(2), ನಮ್ರತಾ ಹೊಸ್ಮಠ್(3), ಭುವನೇಶ್ವರಿ ಡಿ(4), ವರ್ಣಿಕಾ ಆರ್(5), ಪುಷ್ಪಾ ಡಿ(6), ಪೂಜಾ ಎಸ್. ಕುಮಾರ್(7), ಸುನಿಲ್ ಎಚ್.ಸಿ(8), ಕೃಷ್ಣಪ್ಪ ಪಮ್ಮಾರ್ (9), ಗೀತಾ ಡಿ.(10), ಪುನೀತ್ ಬಿಆರ್ (11), ರಂಜಿತ್ ಕುಮಾರ್ (12), ಸುರಕ್ಷಾ ಕೆಕೆ (13), ಶರ್ಮಿಳಾ ಇಜೆ (14), ಶ್ರುತಿ ತೇಲಿ(15), ಪ್ರಹಾನ್ ಸಿಂಗ್ (16), ಮೇಘಾ ಸೋಮನ್ನವರ್(17), ಮಧುಶ್ರೀ ಆರ್.ಎಂ.(18), ವಿಕಾಸ್ ದಲವಾಯಿ (19), ರಂಜಿತಾ ಎಸ್.(20), ಶ್ರೇಯಾ ಎಚ್.ಜೆ(21), ಧನಂಜಯ್ ಹೆಗ್ಡೆ (22), ತುಷಾರ್ ಸಂಜಯ್ ಸದಾಲಗಿ(23), ಐಶ್ವರ್ಯಾ ಗುಡಾದಿನ್ನಿ(24), ಶ್ರೀದೇವಿ (25), ರಮೇಶ್ ಕೆ.(26), ವಿಜಯಕುಮಾರ್ ಎನ್(27), ಅನಿಲ್ ಜಾನ್ ಸಿಕ್ವೇರಾ(28), ದಾನಪ್ಪ (29), ಕೃತಿಕಾ ಪಿ. ಪವಾರ್ (30), ಮಹಾಂತೇಶ್ ಮಠದ್(31), ಭಾಗ್ಯಶ್ರೀ ಮಾದಾರ್(32), ಸುಮಾ ಟಿ(33) ಇದ್ದಾರೆ.
At just 24 years old, Namrata S Hosmath from Bangalore has achieved the distinction of becoming Karnataka's youngest civil judge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am