ಬ್ರೇಕಿಂಗ್ ನ್ಯೂಸ್
27-02-24 03:50 pm HK News Desk ಕರ್ನಾಟಕ
ತುಮಕೂರು, ಫೆ.27: ಒಂದೇ ದಿನ ಶಸ್ತ್ರಚಿಕಿತ್ಸೆಗೆ ಒಳಗಾದವರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಪಾವಗಡ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸೇರಿಯನ್ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಐದು ದಿನಗಳ ಅವಧಿಯಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಮೂವರಿಗೂ ಕಳೆದ 22ರಂದು ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಘಟನೆ ಸಂಬಂಧ ಶಸ್ತ್ರಚಿಕಿತ್ಸೆ ನಡೆಸಿದ ಡಾ.ಪೂಜಾ ಸೇರಿದಂತೆ ಮೂವರು ಸಿಬಂದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಸೇವೆಯಿಂದ ಅಮಾನತು ಮಾಡಿದ್ದಾರೆ.


ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ ಅನಿತಾ ಸಾವನ್ನಪ್ಪಿದ್ದಾರೆ. 30 ವರ್ಷದ ಅನಿತಾ ಶಸ್ತ್ರ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದಾರೆ. ರಾಜವಂತಿ ಮೂಲದ 20 ವರ್ಷದ ಅಂಜಲಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ.24 ರಂದು ಸಾವನ್ನಪ್ಪಿದ್ದಾರೆ.


ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮ ಅವರಿಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು. ನರಸಮ್ಮರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಫೆಬ್ರವರಿ 25ರಂದು ನರಸಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಂಜಲಿ ಕುಟುಂಬಸ್ಥರು ಪಾವಗಡದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ವೈದ್ಯರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ವೈದ್ಯೆ ಸೇರಿದಂತೆ ಮೂವರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, ಓಟಿ ಟೆಕ್ನಿಷಿಯನ್ ಕಿರಣ್, ಸ್ಟಾಫ್ ನರ್ಸ್ ಪದ್ಮಾವತಿ ಎಂಬವರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.
Two women have died due to alleged medical negligence during caesarean section surgery, and one died following complications developed after hysterectomy at the government hospital in Pavagada of Tumakuru district.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am