ಬ್ರೇಕಿಂಗ್ ನ್ಯೂಸ್
29-02-24 08:38 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ಮಾಜಿ ಐಎಎಸ್ ಅಧಿಕಾರಿ ಹಾಗೂ ಚಿತ್ರನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್(71) ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಲ್ಪಕಾಲದ ಅನಾರೋಗ್ಯದ ಬಳಿಕ ಹೃದಯಾಘಾತಕ್ಕೀಡಾಗಿ ಗುರುವಾರ ನಿಧನರಾದರು.
ಅನಾರೋಗ್ಯದ ಕಾರಣದಿಂದ ಕಳೆದ 25 ದಿನಗಳಿಂದ ಎಚ್ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ. ಶಿವರಾಮು ಇಂದು ಸಂಜೆ 4-15ರ ಸುಮಾರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಅಳಿಯ, ನಟ ಪ್ರದೀಪ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದರು.
![]()


ಮೂಲತಃ ರಾಮನಗರ ಜಿಲ್ಲೆಯವರಾದ ಶಿವರಾಮ್ ಬೆಳೆದಿದ್ದು ಬೆಂಗಳೂರಿನಲ್ಲಿ. ಬಡ ಕುಟುಂಬದಿಂದ ಬಂದಿದ್ದ ಅವರು ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಾಡಿ, ನಂತರ ಟೈಪಿಂಗ್ ಮತ್ತು ಶಾರ್ಟ್ ಹ್ಯಾಂಡ್ ಮುಗಿಸಿ 1972ರಲ್ಲಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಮಾರನೇ ವರ್ಷವೇ ಪೊಲೀಸ್ ಇಲಾಖೆ ಗುಪ್ತಚರ ವಿಭಾಗದಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸ ಮಾಡುತ್ತಲೇ ದೂರ ಶಿಕ್ಷಣ ಮೂಲಕ ಬಿಎ ಮತ್ತು ಎಂಎ ಡಿಗ್ರಿ ಪಡೆದು 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಡಿಎಸ್ ಪಿ ಆಗಿ ಭಡ್ತಿ ಪಡೆದಿದ್ದರು. 1986ರಲ್ಲಿ ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಪಾಸಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.




![]()

1993ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮ್ಯೂಸಿಕಲ್ ಮತ್ತು ರೋಮ್ಯಾಂಟಿಕ್ ಚಿತ್ರ 'ಬಾ ನಲ್ಲೆ ಮಧುಚಂದ್ರಿಕೆ' ಮೂಲಕ ಯಶಸ್ವಿ ನಾಯಕ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿದ್ದರು. ಇದರ ಬಳಿಕ ‘ವಸಂತ ಕಾವ್ಯ’, ‘ಸಾಂಗ್ಲಿಯಾನ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರಗಳು ಯಶಸ್ಸು ತಂದುಕೊಡಲಿಲ್ಲ. ಬಳಿಕ ನಟನೆಯಿಂದ ದೂರವಿದ್ದ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರ ಕಾಂಗ್ರೆಸ್ ಪಕ್ಷ, ಬಳಿಕ ಜೆಡಿಎಸ್ ಸೇರಿ 2014 ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಿಂದ ಸ್ಪರ್ಧಿಸಿದ್ದರು. ಆನಂತರ, ಬಿಜೆಪಿ ಸೇರ್ಪಡೆಯಾಗಿದ್ದರು.
Renowned bureaucrat-turned-actor K.Shivaram passed away on Thursday, at the age of 71. K Shivram was not keeping well from past few days and was undergoing treatment at HCG Hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am