ಬ್ರೇಕಿಂಗ್ ನ್ಯೂಸ್
01-03-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಘಟನೆಗೆ ಬಾಂಬ್ ಕಾರಣ ಎಂಬುದು ಎಫ್ಎಸ್ಎಲ್ ತನಿಖೆಯಲ್ಲಿ ದೃಢಪಟ್ಟಿದೆ. ಗ್ರಾಹಕರ ಸೋಗಿನಲ್ಲಿ ಹೊಟೇಲಿಗೆ ಬಂದಿದ್ದ ವ್ಯಕ್ತಿಯೊಬ್ಬರು ಇಟ್ಟು ಹೋಗಿದ್ದ ಬ್ಯಾಗಿನಲ್ಲಿದ್ದ ಐಇಡಿ ಮಾದರಿಯ ಸ್ಫೋಟಕ ಬ್ಲಾಸ್ಟ್ ಆಗಿದೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಬಂದಿ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹೊಟೇಲ್ ಒಳಗಿನ ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗನ್ನು ಇಟ್ಟು ಹೋಗಿರುವುದು ಪತ್ತೆಯಾಗಿದೆ.
ಆರಂಭದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ ಆಗಿದೆಯೆಂದು ಹೇಳಲಾಗಿತ್ತು. ಅಗ್ನಿಶಾಮಕ ದಳ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳದವರು ಬಂದು ತನಿಖ ನಡೆಸಿದ್ದರು. ಸ್ಫೋಟಗೊಂಡ ಸ್ಥಳದಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಊಟಕ್ಕೆ ಕುಳಿತಿದ್ದ ಜಾಗದ ಅಡಿಭಾಗದಲ್ಲೇ ಬ್ಯಾಗ್ ಒಂದನ್ನು ಇಟ್ಟಿರುವುದು ಪತ್ತೆಯಾಗಿತ್ತು. ಬ್ಯಾಗಿನಲ್ಲಿದ್ದ ಯಾವುದೋ ಸ್ಫೋಟಕ ವಸ್ತು ಸ್ಫೋಟಗೊಂಡಿದೆ. ಆದರೆ ದೊಡ್ಡ ಮಟ್ಟದಲ್ಲಿ ಸ್ಫೋಟ ಆಗದೇ ಇದ್ದುದರಿಂದ ಹೆಚ್ಚಿನ ಅಪಾಯ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಘಟನೆ ಹಿನ್ನೆಲೆಯಲ್ಲಿ ತನಿಖೆಗೆ ಎನ್ಐಎ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಸ್ಥಳದಲ್ಲಿ ಎಡಿಜಿಪಿ ಅಲೋಕ್ ಮೋಹನ್ ಠಿಕಾಣಿ ಹೂಡಿದ್ದು, ಬಾಂಬ್ ಬ್ಲಾಸ್ಟ್ ಅನ್ನುವುದನ್ನು ದೃಢಪಡಿಸಿದ್ದಾರೆ. ಇದರ ಹಿಂದಿರುವ ಶಕ್ತಿಯನ್ನು ಪತ್ತೆ ಮಾಡುತ್ತೇವೆ. ಆದರೆ ಅದು ದೊಡ್ಡ ಮಟ್ಟದ ಸ್ಫೋಟ ಆಗಿರಲಿಲ್ಲ ಎಂದವರು ತಿಳಿಸಿದ್ದಾರೆ. ಐಇಡಿ ಸ್ಫೋಟಕ ವಸ್ತುವನ್ನು ಬಳಸಿರುವುದು ಕಂಡುಬಂದಿದೆ. ಈ ಹಿಂದೆಯೂ ಇಂತಹ ಬ್ಲಾಸ್ಟ್ ಆಗಿತ್ತು. ಇತ್ತೀಚಿನ ದಿನಗಳಲ್ಲಿ ಅಂತಹ ಸ್ಫೋಟ ಆಗಿರಲಿಲ್ಲ. ಕಳೆದ ಸರಕಾರ ಇದ್ದಾಗ ಮಂಗಳೂರಿನಲ್ಲಿ ಅದೇ ಮಾದರಿ ಸ್ಫೋಟ ಆಗಿತ್ತು ಎಂದವರು ಹಾರಿಕೆಯ ಉತ್ತರ ನೀಡಿದ್ದಾರೆ.
#Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister #Siddaramaiah said investigation is on to ascertain the cause and nature of the explosion at the popular #RameshwaramCafe in #Whitefiled pic.twitter.com/3KS4KTmJfW
— Headline Karnataka (@hknewsonline) March 1, 2024
Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister Siddaramaiah said investigation is on to ascertain the cause and nature of the explosion at the popular Rameshwaram Cafe in Whitefiled, and added it might have been caused by an "improvised explosive" device.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm