ಬ್ರೇಕಿಂಗ್ ನ್ಯೂಸ್
01-03-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಘಟನೆಗೆ ಬಾಂಬ್ ಕಾರಣ ಎಂಬುದು ಎಫ್ಎಸ್ಎಲ್ ತನಿಖೆಯಲ್ಲಿ ದೃಢಪಟ್ಟಿದೆ. ಗ್ರಾಹಕರ ಸೋಗಿನಲ್ಲಿ ಹೊಟೇಲಿಗೆ ಬಂದಿದ್ದ ವ್ಯಕ್ತಿಯೊಬ್ಬರು ಇಟ್ಟು ಹೋಗಿದ್ದ ಬ್ಯಾಗಿನಲ್ಲಿದ್ದ ಐಇಡಿ ಮಾದರಿಯ ಸ್ಫೋಟಕ ಬ್ಲಾಸ್ಟ್ ಆಗಿದೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಬಂದಿ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹೊಟೇಲ್ ಒಳಗಿನ ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗನ್ನು ಇಟ್ಟು ಹೋಗಿರುವುದು ಪತ್ತೆಯಾಗಿದೆ.






ಆರಂಭದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ ಆಗಿದೆಯೆಂದು ಹೇಳಲಾಗಿತ್ತು. ಅಗ್ನಿಶಾಮಕ ದಳ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳದವರು ಬಂದು ತನಿಖ ನಡೆಸಿದ್ದರು. ಸ್ಫೋಟಗೊಂಡ ಸ್ಥಳದಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಊಟಕ್ಕೆ ಕುಳಿತಿದ್ದ ಜಾಗದ ಅಡಿಭಾಗದಲ್ಲೇ ಬ್ಯಾಗ್ ಒಂದನ್ನು ಇಟ್ಟಿರುವುದು ಪತ್ತೆಯಾಗಿತ್ತು. ಬ್ಯಾಗಿನಲ್ಲಿದ್ದ ಯಾವುದೋ ಸ್ಫೋಟಕ ವಸ್ತು ಸ್ಫೋಟಗೊಂಡಿದೆ. ಆದರೆ ದೊಡ್ಡ ಮಟ್ಟದಲ್ಲಿ ಸ್ಫೋಟ ಆಗದೇ ಇದ್ದುದರಿಂದ ಹೆಚ್ಚಿನ ಅಪಾಯ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಘಟನೆ ಹಿನ್ನೆಲೆಯಲ್ಲಿ ತನಿಖೆಗೆ ಎನ್ಐಎ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಸ್ಥಳದಲ್ಲಿ ಎಡಿಜಿಪಿ ಅಲೋಕ್ ಮೋಹನ್ ಠಿಕಾಣಿ ಹೂಡಿದ್ದು, ಬಾಂಬ್ ಬ್ಲಾಸ್ಟ್ ಅನ್ನುವುದನ್ನು ದೃಢಪಡಿಸಿದ್ದಾರೆ. ಇದರ ಹಿಂದಿರುವ ಶಕ್ತಿಯನ್ನು ಪತ್ತೆ ಮಾಡುತ್ತೇವೆ. ಆದರೆ ಅದು ದೊಡ್ಡ ಮಟ್ಟದ ಸ್ಫೋಟ ಆಗಿರಲಿಲ್ಲ ಎಂದವರು ತಿಳಿಸಿದ್ದಾರೆ. ಐಇಡಿ ಸ್ಫೋಟಕ ವಸ್ತುವನ್ನು ಬಳಸಿರುವುದು ಕಂಡುಬಂದಿದೆ. ಈ ಹಿಂದೆಯೂ ಇಂತಹ ಬ್ಲಾಸ್ಟ್ ಆಗಿತ್ತು. ಇತ್ತೀಚಿನ ದಿನಗಳಲ್ಲಿ ಅಂತಹ ಸ್ಫೋಟ ಆಗಿರಲಿಲ್ಲ. ಕಳೆದ ಸರಕಾರ ಇದ್ದಾಗ ಮಂಗಳೂರಿನಲ್ಲಿ ಅದೇ ಮಾದರಿ ಸ್ಫೋಟ ಆಗಿತ್ತು ಎಂದವರು ಹಾರಿಕೆಯ ಉತ್ತರ ನೀಡಿದ್ದಾರೆ.
#Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister #Siddaramaiah said investigation is on to ascertain the cause and nature of the explosion at the popular #RameshwaramCafe in #Whitefiled pic.twitter.com/3KS4KTmJfW
— Headline Karnataka (@hknewsonline) March 1, 2024
Bangalore Rameshwaram Cafe bomb blast, Explosion was IED blast, confirms CM Siddaramaiah, 9 injured. Chief Minister Siddaramaiah said investigation is on to ascertain the cause and nature of the explosion at the popular Rameshwaram Cafe in Whitefiled, and added it might have been caused by an "improvised explosive" device.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am