ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm