ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm