ಬ್ರೇಕಿಂಗ್ ನ್ಯೂಸ್
04-03-24 04:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ರಾಜ್ಯಸಭಾ ಚುನಾವಣೆಯ ದಿನ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯ ಎಫ್ಎಸ್ಎಲ್ ವರದಿಯನ್ನು ಬಿಜೆಪಿ ಹಾಕಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಖಾಸಗಿ ಸಂಸ್ಥೆಗಳನ್ನು ಇಟ್ಟುಕೊಂಡು ಖಾಸಗಿಯಾಗಿ ಫೋರೆನ್ಸಿಕ್ ವರದಿಗಳನ್ನು ತರಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡುವುದೇ ಮೊದಲನೇ ದೇಶದ್ರೋಹದ ಕೆಲಸ, ಇದು ಸಾಮಾನ್ಯ ಪ್ರಕರಣ ಅಲ್ಲ, ದೇಶದ್ರೋಹದ ಘೋಷಣೆ ಕೂಗಿದ್ದಾರೆ ಅಂತ ಹೇಳ್ತಾ ಇದ್ದಾರೆ. ಅದಕ್ಕೆ ಸರ್ಕಾರ ಉತ್ತರ ಕೊಡಬೇಕು. ಬಿಜೆಪಿಯವರು ಖಾಸಗಿ ಸಂಸ್ಥೆಗಳ ಹತ್ತಿರ ಹೋಗಿ ಅದನ್ನು ಪಬ್ಲಿಕ್ ಮಾಡ್ತಾ ಇದ್ದಾರಲ್ಲ, ಅದು ಮೊದಲನೇ ದೇಶದ್ರೋಹದ ಕೆಲಸ ಎಂದು ಕಿಡಿಕಾರಿದರು.
ಕ್ಲೂ ಫಾರ್ ಎವಿಡೆನ್ಸ್ ಫೋರೆನ್ಸಿಕ್ ಲ್ಯಾಬ್ ಅನ್ನೋ ಸಂಸ್ಥೆಯ ಕ್ರೆಡಿಬಿಲಿಟಿ ಏನು? ಇವರು ಖಾಸಗಿಯಾಗಿ ಏನಾದರೂ ಮಾಡಿಕೊಳ್ಳಲಿ. ಆ ಸಂಸ್ಥೆಗೆ ಸರ್ಕಾರದ ಸರ್ಟಿಫಿಕೇಶನ್ ಇದಿಯೋ ತರಬೇತಿ ಇದೆಯೋ ನನಗೆ ಗೊತ್ತಿಲ್ಲ ಎಂದ ಪ್ರಿಯಾಂಕ್ ಖರ್ಗೆ, ಇದ್ದರೂ ಕೂಡ ಆ ಲ್ಯಾಬ್ ಈ ವಿಚಾರದಲ್ಲಿ ಸ್ಥಳೀಯ ಪೊಲೀಸರಿಗೆ ಮತ್ತು ಸರ್ಕಾರದ ಗಮನಕ್ಕೆ ತಂದು ವರದಿ ಕೊಡಬೇಕಿತ್ತು. ಅಷ್ಟು ಮೆಚುರಿಟಿ ಸಂಸ್ಥೆಗೆ ಇರಬೇಕಾಗಿತ್ತು. ಬಿಜೆಪಿಯವರು ಫೋರೆನ್ಸಿಕ್ ಲ್ಯಾಬ್ಗೆ ಕೊಟ್ಟಿರುವ ಫೂಟೇಜ್ ಯಾವುದು?ಇಂಟರ್ನೆಟ್ನಲ್ಲಿ ವಿಡಿಯೋ ಕ್ವಾಲಿಟಿ ಸಪ್ರೆಸ್ ಆಗಿಯೇ ಆಗುತ್ತದೆ. ಯಾವ ಫೂಟೇಜ್ ಕೊಟ್ಟಿದ್ದಾರೆ ಮೊದಲನೇ ಪ್ರಶ್ನೆ, ರಾ ಫೂಟೇಜ್ ಕೊಟ್ಟಿದ್ರೆ ಇವರಿಗೆ ರಾ ಫೂಟೇಜ್ ಎಲ್ಲಿಂದ ಸಿಕ್ತು? ಎಂದು ಪ್ರಶ್ನಿಸಿದರು.
ಇನ್ನು, ಖಾಸಗಿಯಾಗಿ ಎಫ್ಎಸ್ಎಲ್ ವರದಿ ತಯಾರಿಸಿದ ಸಂವಾದ ಫೌಂಡೇಶನ್ಗೆ ಏನು ಆಸಕ್ತಿ ಹೂ ಆರ್ ದೇ? ಎಂದು ಪ್ರಶ್ನಿಸಿದ ಖರ್ಗೆ, ಸಂವಾದ ಸಂಸ್ಥೆ RSS ನವರ ಭಜನೆ ಆಡುವ ಸಂಸ್ಥೆ. ಇದು ಯಾವ ರೀತಿ ಸಾಮಾಜಿಕ ಜಾಲತಾಣದಲ್ಲಿ ಜಾತಿ ಜಾತಿಗಳ ನಡುವೆ ಜಗಳ ಹಚ್ಚುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೂ ಆರ್ ದೇ? ಫೂಟೇಜ್ ಕೊಡೋದಕ್ಕೆ ಲ್ಯಾಬ್ ಟೆಸ್ಟ್ ಮಾಡುವುದಕ್ಕೆ ಅವರು ಯಾರು? ಎಂದು ಪ್ರಶ್ನಿಸಿದರು.
ಇನ್ನು, ಸರ್ಕಾರ ಪದೇ ಪದೇ ಎಫ್ಎಸ್ಎಲ್ ರಿಪೋರ್ಟ್ ನೋಡುವುದಕ್ಕೆ ಕಾರಣ ಯಾವುದೇ ಗೊಂದಲ ಇರಬಾರದು ಅನ್ನೋದು ಎಂದ ಸಚಿವ ಪ್ರಿಯಾಂಕ ಖರ್ಗೆ, ಇವರು ಯಾವ ಫೂಟೇಜ್ ಕೊಟ್ಟಿದ್ದಾರೋ? ಮೂರು ತೆಗೆದುಕೊಂಡಿದ್ದಾರೋ ನೂರು ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಗೃಹ ಇಲಾಖೆ ಇದರ ಬಗ್ಗೆ ವರದಿ ಕೊಡಬೇಕೇ ಹೊರತು ಸಂವಾದ ಫೌಂಡೇಶನ್ ಅಲ್ಲ. ಬಿಜೆಪಿಯವರಿಗೆ ಜವಾಬ್ದಾರಿಯುತ ಪಕ್ಷವಾಗಿ ಸಂವಾದ ಹಾಕಿದ ತಾಳಕ್ಕೆ ಕುಣಿತಾರಲ್ಲ ಇವರಿಗೆ ನಾಚಿಕೆ ಬೇಡ್ವಾ? ಎಂದು ಹೀಯಾಳಿಸಿದರು.
Priyank kharge slams samvada foundation over fsl report of Pakistan zindabad twitted by BJP.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am