ಬ್ರೇಕಿಂಗ್ ನ್ಯೂಸ್
05-03-24 07:03 pm HK News Desk ಕರ್ನಾಟಕ
ಹಾಸನ, ಮಾ.05: ''ಸಿದ್ದರಾಮಯ್ಯನವರೇ ಸಂಪೂರ್ಣ ಐದು ವರ್ಷ ಅಧಿಕಾರ ಪೂರೈಸುತ್ತಾರೆ ಲೋಕಸಭಾ ಚುನಾವಣೆ ನಂತರ ಎರಡೂವರೆ ವರ್ಷ ಮತ್ತೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂಬುದೆಲ್ಲ ಉಹಾಪೋಹ'' ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಹಾಸನ ತಾಲೂಕಿನ ಹಳ್ಳಿಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿಗಳ ಪಟ್ಟಕ್ಕೆ ಆಕಾಂಕ್ಷಿತರು ಇದ್ದೇ ಇರುತ್ತಾರೆ. ಆದರೆ ಸುಭದ್ರ ಸರಕಾರ ನೀಡುವ ಗುರಿ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಇದೆ'' ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ನೀವು ರ್ಸ್ಪಸುತ್ತಿರಾ ಎಂಬ ಪ್ರಶ್ನೆಗೆ ರಾಜ್ಯ ರಾಜಕಾರಣದಲ್ಲೇ ಉಳಿಯಬೇಕೆಂಬ ಇಚ್ಛೆ ಇದೆ ಹೈಕಮಾಂಡ್ ತೀರ್ಮಾನ ತನಗೆ ತಿಳಿದಿಲ್ಲ ಎಂದು ಉತ್ತರಿಸಿದರು. ಜಾತಿಗಣತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಈಗಾಗಲೇ ಗಣತಿ ಮಾಡಲಾಗಿದೆ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ. ಕ್ಯಾಬಿನೆಟ್ ಅಪ್ರೂವಲ್ ಸಮಯ ಸಂದ‘ ನೋಡಿ ಪಡೆಯಲಾಗುತ್ತದೆ ಎಂದರು. ಸರಕಾರ ಕಾನೂನು ಚೌಕಟ್ಟಿನ ಎಲ್ಲವನ್ನೂ ಪರಿಶೀಲಿಸಿಯೇ ವರದಿ ಪಡೆದಿದೆ ಎಂದರು.
ಶ್ಯಾಮನೂರು ಶಿವಶಂಕರಪ್ಪ ಸ್ವಪಕ್ಷೀಯರಾಗಿದ್ದು, ಅಪಸ್ವರ ಎಂಬ ಪ್ರಶ್ನೆಗೆ ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗಲ್ಲ ಎಂದರು. ಬೆಂಗಳೂರು ರಾಮೇಶ್ವರಂ ಕೆಫೆಯ ಬಾಂಬ್ಬ್ಲಾಸ್ಟ್ ಪ್ರಕರಣ ತನಿಖೆ ನಡೆದಿದೆ. ಇದರ ಹಿಂದೆ ಯಾರ ಕೈವಾಡ ಇದೆ ಎಂದು ತನಿಖೆ ನಂತರವೇ ತಿಳಿಯಬೇಕಿದೆ. ಈ ಹಂತದಲ್ಲಿ ಮಾತನಾಡುವುದು ಸರಿಯಲ್ಲ ಎಂದರು.
ಚರ್ಚೆಗೆ ನಾಂದಿ ಹಾಡಿದ್ದ ಯತೀಂದ್ರ ;
ಇಧೇ ವರ್ಷ ಜನವರಿಯಲ್ಲಿ ಯತೀಂದ್ರ ಸಿದ್ದರಾಮಯ್ಯನವರು, ಲೋಕಸಭೆಯಲ್ಲಿ ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮಾತ್ರ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದರು. ಜ. 17ರಂದು, ಹೊಳೆನರಸೀಪುರದ ಅಣ್ಣೆಚಾಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುವ ಮೊದಲೇ ಚುನಾವಣೆಗೂ ಮೊದಲು ಕಾಂಗ್ರೆಸ್ ಹೇಳಿದ್ದ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ. ಆದ್ದರಿಂದ ಅವರಿಗೆ ನೈತಿಕ ಬಲ ತುಂಬಬೇಕಿದೆ. ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್ ಗೆ ಹೆಚ್ಚು ಶಕ್ತಿಯನ್ನು ಜನರು ತರಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ ಅವರು ಐದು ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ'' ಎಂದು ಹೇಳಿದ್ದರು.
Yathindra Siddaramaiah says father CM Siddaramaiah to continue as cm for the next five years
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am