ಬ್ರೇಕಿಂಗ್ ನ್ಯೂಸ್
05-03-24 07:03 pm HK News Desk ಕರ್ನಾಟಕ
ಹಾಸನ, ಮಾ.05: ''ಸಿದ್ದರಾಮಯ್ಯನವರೇ ಸಂಪೂರ್ಣ ಐದು ವರ್ಷ ಅಧಿಕಾರ ಪೂರೈಸುತ್ತಾರೆ ಲೋಕಸಭಾ ಚುನಾವಣೆ ನಂತರ ಎರಡೂವರೆ ವರ್ಷ ಮತ್ತೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂಬುದೆಲ್ಲ ಉಹಾಪೋಹ'' ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಹಾಸನ ತಾಲೂಕಿನ ಹಳ್ಳಿಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿಗಳ ಪಟ್ಟಕ್ಕೆ ಆಕಾಂಕ್ಷಿತರು ಇದ್ದೇ ಇರುತ್ತಾರೆ. ಆದರೆ ಸುಭದ್ರ ಸರಕಾರ ನೀಡುವ ಗುರಿ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಇದೆ'' ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ನೀವು ರ್ಸ್ಪಸುತ್ತಿರಾ ಎಂಬ ಪ್ರಶ್ನೆಗೆ ರಾಜ್ಯ ರಾಜಕಾರಣದಲ್ಲೇ ಉಳಿಯಬೇಕೆಂಬ ಇಚ್ಛೆ ಇದೆ ಹೈಕಮಾಂಡ್ ತೀರ್ಮಾನ ತನಗೆ ತಿಳಿದಿಲ್ಲ ಎಂದು ಉತ್ತರಿಸಿದರು. ಜಾತಿಗಣತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಈಗಾಗಲೇ ಗಣತಿ ಮಾಡಲಾಗಿದೆ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ. ಕ್ಯಾಬಿನೆಟ್ ಅಪ್ರೂವಲ್ ಸಮಯ ಸಂದ‘ ನೋಡಿ ಪಡೆಯಲಾಗುತ್ತದೆ ಎಂದರು. ಸರಕಾರ ಕಾನೂನು ಚೌಕಟ್ಟಿನ ಎಲ್ಲವನ್ನೂ ಪರಿಶೀಲಿಸಿಯೇ ವರದಿ ಪಡೆದಿದೆ ಎಂದರು.
ಶ್ಯಾಮನೂರು ಶಿವಶಂಕರಪ್ಪ ಸ್ವಪಕ್ಷೀಯರಾಗಿದ್ದು, ಅಪಸ್ವರ ಎಂಬ ಪ್ರಶ್ನೆಗೆ ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗಲ್ಲ ಎಂದರು. ಬೆಂಗಳೂರು ರಾಮೇಶ್ವರಂ ಕೆಫೆಯ ಬಾಂಬ್ಬ್ಲಾಸ್ಟ್ ಪ್ರಕರಣ ತನಿಖೆ ನಡೆದಿದೆ. ಇದರ ಹಿಂದೆ ಯಾರ ಕೈವಾಡ ಇದೆ ಎಂದು ತನಿಖೆ ನಂತರವೇ ತಿಳಿಯಬೇಕಿದೆ. ಈ ಹಂತದಲ್ಲಿ ಮಾತನಾಡುವುದು ಸರಿಯಲ್ಲ ಎಂದರು.
ಚರ್ಚೆಗೆ ನಾಂದಿ ಹಾಡಿದ್ದ ಯತೀಂದ್ರ ;
ಇಧೇ ವರ್ಷ ಜನವರಿಯಲ್ಲಿ ಯತೀಂದ್ರ ಸಿದ್ದರಾಮಯ್ಯನವರು, ಲೋಕಸಭೆಯಲ್ಲಿ ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮಾತ್ರ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದರು. ಜ. 17ರಂದು, ಹೊಳೆನರಸೀಪುರದ ಅಣ್ಣೆಚಾಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುವ ಮೊದಲೇ ಚುನಾವಣೆಗೂ ಮೊದಲು ಕಾಂಗ್ರೆಸ್ ಹೇಳಿದ್ದ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ. ಆದ್ದರಿಂದ ಅವರಿಗೆ ನೈತಿಕ ಬಲ ತುಂಬಬೇಕಿದೆ. ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್ ಗೆ ಹೆಚ್ಚು ಶಕ್ತಿಯನ್ನು ಜನರು ತರಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ ಅವರು ಐದು ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ'' ಎಂದು ಹೇಳಿದ್ದರು.
Yathindra Siddaramaiah says father CM Siddaramaiah to continue as cm for the next five years
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am