ಬ್ರೇಕಿಂಗ್ ನ್ಯೂಸ್
06-03-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ತನಿಖೆ ಕೈಗೆತ್ತಿಕೊಂಡ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಆರೋಪಿಯ ಸಿಸಿಟಿವಿ ಚಿತ್ರವನ್ನು ಮುಂದಿಟ್ಟು ಆತನ ಪತ್ತೆಗಾಗಿ ಹತ್ತು ಲಕ್ಷದ ಬಹುಮಾನ ಪ್ರಕಟಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ಕೊಟ್ಟವರಿಗೆ ಹತ್ತು ಲಕ್ಷ ನೀಡಲಾಗುವುದು. ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಆಮೂಲಕ ಎನ್ಐಎ ಅಧಿಕಾರಿಗಳು ಅಧಿಕೃತವಾಗಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ತನಿಖೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆ ಹೊಟೇಲಿನಲ್ಲಿ ಮಾ.1ರಂದು ಮಧ್ಯಾಹ್ನ ಆಗಂತುಕನೊಬ್ಬ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸ್ಫೋಟಕ ಟೈಮರ್ ಆಧರಿಸಿ ಸಿಡಿದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಯುವಕ ಬ್ಯಾಗನ್ನು ಬೇಸಿನ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಮತ್ತು ಅದರಲ್ಲಿ ಸ್ಫೋಟಕ ಸಾಮಗ್ರಿ ಬ್ಲಾಸ್ಟ್ ಆಗಿರುವುದು ಕಂಡುಬಂದಿತ್ತು. ಪೊಲೀಸರು ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ, ಯುವಕ ಬಿಎಂಟಿಸಿ ಬಸ್ಸಿನಲ್ಲೇ ಬಂದು ಹೋಗಿರುವುದು ದಾಖಲಾಗಿತ್ತು. ಘಟನೆ ಹಿಂದೆ ಭಯೋತ್ಪಾದಕ ಕೃತ್ಯದ ಬಗ್ಗೆ ಶಂಕೆಯಿದ್ದು, ಪೊಲೀಸರು ಹತ್ತು ತಂಡ ಕಟ್ಟಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಈತನಕವೂ ತನಿಖಾ ತಂಡಕ್ಕೆ ಯಾವುದೇ ಮಾಹಿತಿಯೂ ಸಿಕ್ಕಿಲ್ಲ.
ಈ ಹಿಂದೆ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿಯೂ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇಬ್ಬರಿಗೆ ತಲಾ 5 ಲಕ್ಷ, ಉಳಿದವರಿಗೆ ತಲಾ ಎರಡೂವರೆ ಲಕ್ಷದ ಬಹುಮಾನ ಪ್ರಕಟಿಸಲಾಗಿತ್ತು. ತಲೆಮರೆಸಿಕೊಂಡ ಐದು ಮಂದಿಯಲ್ಲಿ ಇಬ್ಬರು ಇನ್ನೂ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.
A day after taking over the probe into the Rameswaram café blast case, the National Investigation Agency (NIA) has released a cctv footage of the accused and announced a reward of Rs 10 lakh for his arrest.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm