ಬ್ರೇಕಿಂಗ್ ನ್ಯೂಸ್
06-03-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ತನಿಖೆ ಕೈಗೆತ್ತಿಕೊಂಡ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಆರೋಪಿಯ ಸಿಸಿಟಿವಿ ಚಿತ್ರವನ್ನು ಮುಂದಿಟ್ಟು ಆತನ ಪತ್ತೆಗಾಗಿ ಹತ್ತು ಲಕ್ಷದ ಬಹುಮಾನ ಪ್ರಕಟಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ಕೊಟ್ಟವರಿಗೆ ಹತ್ತು ಲಕ್ಷ ನೀಡಲಾಗುವುದು. ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಆಮೂಲಕ ಎನ್ಐಎ ಅಧಿಕಾರಿಗಳು ಅಧಿಕೃತವಾಗಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ತನಿಖೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆ ಹೊಟೇಲಿನಲ್ಲಿ ಮಾ.1ರಂದು ಮಧ್ಯಾಹ್ನ ಆಗಂತುಕನೊಬ್ಬ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸ್ಫೋಟಕ ಟೈಮರ್ ಆಧರಿಸಿ ಸಿಡಿದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಯುವಕ ಬ್ಯಾಗನ್ನು ಬೇಸಿನ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಮತ್ತು ಅದರಲ್ಲಿ ಸ್ಫೋಟಕ ಸಾಮಗ್ರಿ ಬ್ಲಾಸ್ಟ್ ಆಗಿರುವುದು ಕಂಡುಬಂದಿತ್ತು. ಪೊಲೀಸರು ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ, ಯುವಕ ಬಿಎಂಟಿಸಿ ಬಸ್ಸಿನಲ್ಲೇ ಬಂದು ಹೋಗಿರುವುದು ದಾಖಲಾಗಿತ್ತು. ಘಟನೆ ಹಿಂದೆ ಭಯೋತ್ಪಾದಕ ಕೃತ್ಯದ ಬಗ್ಗೆ ಶಂಕೆಯಿದ್ದು, ಪೊಲೀಸರು ಹತ್ತು ತಂಡ ಕಟ್ಟಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಈತನಕವೂ ತನಿಖಾ ತಂಡಕ್ಕೆ ಯಾವುದೇ ಮಾಹಿತಿಯೂ ಸಿಕ್ಕಿಲ್ಲ.
ಈ ಹಿಂದೆ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿಯೂ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇಬ್ಬರಿಗೆ ತಲಾ 5 ಲಕ್ಷ, ಉಳಿದವರಿಗೆ ತಲಾ ಎರಡೂವರೆ ಲಕ್ಷದ ಬಹುಮಾನ ಪ್ರಕಟಿಸಲಾಗಿತ್ತು. ತಲೆಮರೆಸಿಕೊಂಡ ಐದು ಮಂದಿಯಲ್ಲಿ ಇಬ್ಬರು ಇನ್ನೂ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.
A day after taking over the probe into the Rameswaram café blast case, the National Investigation Agency (NIA) has released a cctv footage of the accused and announced a reward of Rs 10 lakh for his arrest.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am