ಬ್ರೇಕಿಂಗ್ ನ್ಯೂಸ್
09-03-24 07:17 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 09: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.
17 ಕಾರಣಗಳನ್ನು ಕೊಟ್ಟು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಮಂಜುನಾಥ್ ವಿರುದ್ಧು 17 ಕ್ರಿಮಿನಲ್ ಪ್ರಕರಣ ಮತ್ತು 7 ಮುಂಜಾಗ್ರತಾ ಪ್ರಕರಣ ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
Chikkamagaluru bajarang dal Tudkur Manju issued exile notice over criminal cases. Police have made clear statement that he will arise communial issues in state and therefore have issued exile order.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am