ಬ್ರೇಕಿಂಗ್ ನ್ಯೂಸ್
09-03-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.9: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಜೆಡಿಎಸ್ ಸೀಟಿನ ಬಗ್ಗೆ ಮಹತ್ವದ ಚರ್ಚೆಯಾಗಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಅಥವಾ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ ಭಾನುವಾರವೇ ನವದೆಹಲಿಗೆ ತೆರಳಲಿದ್ದಾರೆ. ಜೆಡಿಎಸ್ಗೆ ನಾಲ್ಕು ಕ್ಷೇತ್ರಗಳೆಂಬುದು ಊಹಾಪೋಹ ಮಾತ್ರ. ಜೆಡಿಎಸ್ ಸಿದ್ಧತೆ ಗಮನಿಸಿದರೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳು ಬಹುತೇಕ ಫಿಕ್ಸ್ ಎಂಬಂತಿದೆ.
ಈಗಾಗಲೇ ಈ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಜೆಡಿಎಸ್ಗೆ 3ಕ್ಕಿಂತ ಹೆಚ್ಚು ಸೀಟು ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಹಾಸನ, ಮಂಡ್ಯ, ಕೋಲಾರ ಬಹುತೇಕ ಖಚಿತವಾಗಿದೆ. ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಇದಕ್ಕೆ ಸಮ್ಮತಿ ಇದ್ದು ತಮ್ಮದೇ ಒಬ್ಬರು ಬಿಜೆಪಿಯಲ್ಲಿ ನಿಲ್ಲುವ ಮೂಲಕ ಮತ್ತೊಂದು ಕ್ಷೇತ್ರ ಸಿಕ್ಕಂತೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ದೆಹಲಿ ಮೀಟಿಂಗಲ್ಲೂ ಮೂರಕ್ಕಿಂತ ಹೆಚ್ಚು ಸೀಟಿಗಾಗಿ ಚೌಕಾಶಿ ಮಾಡುವುದು ಡೌಟು ಎನ್ನಲಾಗುತ್ತಿದೆ.
The BJP-JD(S) seat-sharing talks for the Lok Sabha elections are in the final stages. The BJP central election committee meeting will be held in New Delhi on Sunday to discuss the JD(S) seat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am