ಬ್ರೇಕಿಂಗ್ ನ್ಯೂಸ್
11-03-24 08:46 pm HK News Desk ಕರ್ನಾಟಕ
ಕಾರವಾರ, ಮಾ.11: ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಸೋಮವಾರ ಮತ್ತೊಂದು ವಿವಾದಕ್ಕೆ ತುತ್ತಾಗಿದ್ದಾರೆ. ನಾನು ಹೇಳಿದ್ದರ ಬಗ್ಗೆ ಬೇವರ್ಸಿ ಮಾಧ್ಯಮಗಳು ಬೇಕಾದ್ದನ್ನು ಬರೆಯಲಿ, ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನೀವೆಲ್ಲಾ (ಜನರು) ಇದಕ್ಕೆ ವಿಚಲಿತರಾಗಬಾರದು ಎಂದು ಅನಂತ ಕುಮಾರ್ ಹೆಗಡೆ ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
“ನೀವು ಯಾವುದೋ ಪಕ್ಷದ ಕಾರ್ಯಕರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಏನೇನೋ ಹೇಳಿದರು ಅಂತ ವಿಚಲಿತರಾಗಬಾರದು. ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡಿಯಬೇಕು ಎಂದು ಹೇಳಿದ ಅವರು, “ಆನೆ ನಡೀತಾ ಇದ್ರೆ ಯಾವಾಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.? ನಾಯಿಗಳಿಗೂ ಗೊತ್ತು ನಾವು ಎಷ್ಟೇ ಬೊಗಳಿದ್ರೂ ಆನೆಗೆ ಏನೂ ಮಾಡೋಕೆ ಆಗಲ್ಲ ಅಂತ. ನಾಯಿಗಳು ಬೊಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ’’ ಎಂದು ಹೇಳಿದ್ದಾರೆ.

ನಮ್ಮ ಸಿದ್ದಾಮುಲ್ಲಾ ಖಾನ್ ಸರಕಾರದಲ್ಲಿ ದುಡ್ಡಿಲ್ಲ, ಗ್ಯಾರಂಟಿ ಗ್ಯಾರಂಟಿ ಹೇಳಿ ಒಂದೇ ವರ್ಷದಲ್ಲಿ ರಾಜ್ಯ ದಿವಾಳಿ ಎದ್ದು ಹೋಗಿದೆ. ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ನೀಡಲು ಕೂಡಾ ಹಿಂದೆ ಮುಂದೆ ನೋಡ್ತಿದ್ದಾರೆ. ಗ್ರಾ.ಪಂ. ಸದಸ್ಯರಿಗೆ ದೊರೆಯುವ ಮಾಸಾಶನ ಕೂಡಾ ಸರಿಯಾಗಿ ತಲುಪುತ್ತಿಲ್ಲ. ಬಿಜೆಪಿ ಸದಸ್ಯರು ಹೋಗಿ ಗಲಾಟೆ ಮಾಡಿದ ನಂತರ ಕೇವಲ ನಾಲ್ಕು ತಿಂಗಳದ್ದು ನೀಡಿದ್ದಾರೆ. ಬಿಜೆಪಿ ಸರಕಾರವಿದ್ದಾಗ ಹಣವಿರುತ್ತೆ, ಕಾಂಗ್ರೆಸ್ ಸರಕಾರವಿದ್ದಾಗ ಹಣವಿರುವುದಿಲ್ಲ ಎಂದವರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಾವು 400 ಸ್ಥಾನ ಪಡೆದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ. ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ತಿದ್ದುತ್ತೇವೆ. ಜಾತ್ಯತೀತ ಪದವನ್ನು ಸಂವಿಧಾನದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿರುವುದು ಭಾರೀ ವಿವಾದಕ್ಕೆ ಗುರಿಯಾಗಿತ್ತು.
MP Ananth kumar hegde calls media as Dogs and pigs sparks controversy. Says when elephant is walking will it bother about the dogs barking in the street he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am