ಬ್ರೇಕಿಂಗ್ ನ್ಯೂಸ್
11-03-24 08:46 pm HK News Desk ಕರ್ನಾಟಕ
ಕಾರವಾರ, ಮಾ.11: ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಸೋಮವಾರ ಮತ್ತೊಂದು ವಿವಾದಕ್ಕೆ ತುತ್ತಾಗಿದ್ದಾರೆ. ನಾನು ಹೇಳಿದ್ದರ ಬಗ್ಗೆ ಬೇವರ್ಸಿ ಮಾಧ್ಯಮಗಳು ಬೇಕಾದ್ದನ್ನು ಬರೆಯಲಿ, ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನೀವೆಲ್ಲಾ (ಜನರು) ಇದಕ್ಕೆ ವಿಚಲಿತರಾಗಬಾರದು ಎಂದು ಅನಂತ ಕುಮಾರ್ ಹೆಗಡೆ ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
“ನೀವು ಯಾವುದೋ ಪಕ್ಷದ ಕಾರ್ಯಕರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಏನೇನೋ ಹೇಳಿದರು ಅಂತ ವಿಚಲಿತರಾಗಬಾರದು. ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡಿಯಬೇಕು ಎಂದು ಹೇಳಿದ ಅವರು, “ಆನೆ ನಡೀತಾ ಇದ್ರೆ ಯಾವಾಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.? ನಾಯಿಗಳಿಗೂ ಗೊತ್ತು ನಾವು ಎಷ್ಟೇ ಬೊಗಳಿದ್ರೂ ಆನೆಗೆ ಏನೂ ಮಾಡೋಕೆ ಆಗಲ್ಲ ಅಂತ. ನಾಯಿಗಳು ಬೊಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ’’ ಎಂದು ಹೇಳಿದ್ದಾರೆ.

ನಮ್ಮ ಸಿದ್ದಾಮುಲ್ಲಾ ಖಾನ್ ಸರಕಾರದಲ್ಲಿ ದುಡ್ಡಿಲ್ಲ, ಗ್ಯಾರಂಟಿ ಗ್ಯಾರಂಟಿ ಹೇಳಿ ಒಂದೇ ವರ್ಷದಲ್ಲಿ ರಾಜ್ಯ ದಿವಾಳಿ ಎದ್ದು ಹೋಗಿದೆ. ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ನೀಡಲು ಕೂಡಾ ಹಿಂದೆ ಮುಂದೆ ನೋಡ್ತಿದ್ದಾರೆ. ಗ್ರಾ.ಪಂ. ಸದಸ್ಯರಿಗೆ ದೊರೆಯುವ ಮಾಸಾಶನ ಕೂಡಾ ಸರಿಯಾಗಿ ತಲುಪುತ್ತಿಲ್ಲ. ಬಿಜೆಪಿ ಸದಸ್ಯರು ಹೋಗಿ ಗಲಾಟೆ ಮಾಡಿದ ನಂತರ ಕೇವಲ ನಾಲ್ಕು ತಿಂಗಳದ್ದು ನೀಡಿದ್ದಾರೆ. ಬಿಜೆಪಿ ಸರಕಾರವಿದ್ದಾಗ ಹಣವಿರುತ್ತೆ, ಕಾಂಗ್ರೆಸ್ ಸರಕಾರವಿದ್ದಾಗ ಹಣವಿರುವುದಿಲ್ಲ ಎಂದವರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಾವು 400 ಸ್ಥಾನ ಪಡೆದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ. ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ತಿದ್ದುತ್ತೇವೆ. ಜಾತ್ಯತೀತ ಪದವನ್ನು ಸಂವಿಧಾನದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿರುವುದು ಭಾರೀ ವಿವಾದಕ್ಕೆ ಗುರಿಯಾಗಿತ್ತು.
MP Ananth kumar hegde calls media as Dogs and pigs sparks controversy. Says when elephant is walking will it bother about the dogs barking in the street he added.
26-02-26 12:58 pm
HK News Staffer
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 04:45 pm
HK News Staffer
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm