ಬ್ರೇಕಿಂಗ್ ನ್ಯೂಸ್
12-03-24 03:15 pm HK News Desk ಕರ್ನಾಟಕ
ಮೈಸೂರು, ಮಾ 12: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೋಮವಾರ ತಡರಾತ್ರಿ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.
ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.
ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ.
ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.
Mysuru Mp Prathap Simha cries out during Facebook live over ticket missing, says thanks to all for your love and support. Can't predict anything in politics he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am