ಬ್ರೇಕಿಂಗ್ ನ್ಯೂಸ್
12-03-24 03:15 pm HK News Desk ಕರ್ನಾಟಕ
ಮೈಸೂರು, ಮಾ 12: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೋಮವಾರ ತಡರಾತ್ರಿ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.
ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.
ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ.
ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.
Mysuru Mp Prathap Simha cries out during Facebook live over ticket missing, says thanks to all for your love and support. Can't predict anything in politics he added.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm