ಬ್ರೇಕಿಂಗ್ ನ್ಯೂಸ್
12-03-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯಾದ್ಯಂತ ಏಕಪ್ರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 8 ಮತ್ತು 9ನೇ ತರಗತಿಗೆ ನಡೆಸುತ್ತಿದ್ದ ಪಬ್ಲಿಕ್ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ. ಎರಡು ದಿನಗಳ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೀಡಿದ್ದ ತಡೆಯಾಜ್ಞೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಾ.13ರಿಂದ 16ರ ವರೆಗೆ ಆಯೋಜಿಸಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಪರೀಕ್ಷೆ ರದ್ದುಗೊಳಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಮಾನ್ಯ ಮಾಡಿತ್ತು. ಆದರೆ, ರಾಜ್ಯ ಸರಕಾರ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಪ್ರಶ್ನಿಸಿ, ಏಕಸದಸ್ಯ ಪೀಠದ ನಿರ್ಧಾರಕ್ಕೆ ತಡೆಯಾಜ್ಞೆ ತಂದಿತ್ತು. ವಿಭಾಗೀಯ ಪೀಠವು ಪರೀಕ್ಷೆಗಳನ್ನು ಎಂದಿನಂತೆ ನಡೆಸುವುದಕ್ಕೆ ಅವಕಾಶ ನೀಡಿತ್ತು. ಅದರಂತೆ, ಸೋಮವಾರದಿಂದ ಪರೀಕ್ಷೆ ನಡೆಸಲಾಗಿತ್ತು.
ಆದರೆ, ಖಾಸಗಿ ಶಾಲಾಡಳಿತ ಒಕ್ಕೂಟವು ತನ್ನ ಪಟ್ಟು ಸಡಿಲಿಸದೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಇದರಿಂದ ಶಾಲಾ ಹಂತದಲ್ಲಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿರುವಾಗಲೇ ಅರ್ಧಕ್ಕೆ ನಿಂತು ಹೋದಂತಾಗಿದ್ದು, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಉಳಿದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದ ಶಾಲೆಗಳಲ್ಲಿ ಎಂದಿನಂತೆ ಶಾಲಾ ತರಗತಿ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಾಜ್ಯ ಸರಕಾರ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದು, ಪಬ್ಲಿಕ್ ಪರೀಕ್ಷೆ ನಡೆಸುವುದಕ್ಕೆ ಸ್ವಾಯತ್ತ ಅಧಿಕಾರ ಹೊಂದಿದ್ದೇವೆ ಎಂಬುದನ್ನು ಕೋರ್ಟಿಗೆ ಮನವರಿಕೆ ಮಾಡುವ ಸಾಧ್ಯತೆಯಿದೆ. ಪರೀಕ್ಷೆ ನಡೆಯುತ್ತಿರುವಾಗಲೇ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ವಿದ್ಯಾರ್ಥಿಗಳು ಮತ್ತು ಶಾಲಾಡಳಿತಕ್ಕೆ ಗೊಂದಲಕ್ಕೀಡು ಮಾಡಿದೆ.
The Supreme Court on Tuesday (March 12) put on hold the Board Exams proposed to be held by the Karnataka Government for students of Classes 5, 8 and 9 of the schools affiliated to the State Board.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am