ಬ್ರೇಕಿಂಗ್ ನ್ಯೂಸ್
13-03-24 06:38 pm HK News Desk ಕರ್ನಾಟಕ
ರಾಮನಗರ, ಮಾ 13: “ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಮಂಜುನಾಥ್ ಅವರು ರಾಜಕೀಯವಾಗಿ ಅಮಾಯಕರು. ಅವರು ಒಳ್ಳೇ ಡಾಕ್ಟರ್ ಆಗಿರುವಂಥವರು. ರಾಜಕೀಯ ಅವರಿಗೆ ಒಗ್ಗುವಂಥದ್ದಲ್ಲ. ಅಂಥ ಅಮಾಯಕರನ್ನು ಚುನಾವಣೆಗೆ ಎಳೆದು ತಂದು, ರಾಮನಗರದಲ್ಲಿ ಡಿಕೆ ಸುರೇಶ್ ವಿರುದ್ಧ ನಿಲ್ಲಿಸುವ ಮೂಲಕ ಜೆಡಿಎಸ್ ನವರು ಅವರನ್ನು ಬಲಿಪಶು ಮಾಡುತ್ತಿದ್ದಾರೆ’’ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಇದೇ ವೇಳೆ, ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ ಅವರು, “ಡಿಕೆ ಸುರೇಶ್ ವಿರುದ್ಧ ನಿಲ್ಲೋಕೆ ಎರಡು ಬಾರಿ ಸಿಎಂ ಆಗಿದ್ದ ನಿಮಗೆ ತಾಕತ್ತಿಲ್ಲವಾ’’ ಎಂದು ಪ್ರಶ್ನಿಸಿದ್ದಾರೆ. “ಹೆಚ್ಡಿಕೆಗೆ ತಾಕತಿಲ್ವಾ., ನಿಮಗೆ ಗಂಡಸ್ತನ ಇಲ್ವಾ.!?ಎರಡು ಬಾರಿ ಸಿಎಂ ಆದವ್ರು, ಮಾಜಿ ಸಿಎಂಗೆ ನಿಲ್ಲೋ ತಾಕತಿಲ್ವಾ.?’’ ಎಂದು ಕೇಳಿರುವ ಅವರು, “ಅಶ್ವತ್ಥ್ ನಾರಾಯಣ್ ಅವರು ಹಿಂದೆ ಇಲ್ಲಿ ಉಸ್ತುವಾರಿ ಮಂತ್ರಿ ಆಗ್ರಿದಲ್ಲ ಅವರನ್ನ, ನಿಲ್ಲಿಸಬಹದಿತ್ತಲ್ವಾ.? ಅಷ್ಟೆಲ್ಲಾ ಯಾಕೆ ಸಿ.ಪಿ.ಯೋಗೇಶ್ವರ್ ಅವರೇ ನಿಲ್ಲಬಹುದಿತ್ತಲ್ಲವಾ’’ ಎಂದು ಪ್ರಶ್ನಿಸಿದ್ದಾರೆ.
ಪಾಪ… ಡಿ.ಕೆ.ಸುರೇಶ್ ವಿರುದ್ಧ ಮಂಜುನಾಥ್ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಡಿ ಕೆ ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲ ಅನ್ನೋದು ಗೊತ್ತಾಗ್ತಿದೆ ಎಂದು ಹುಸೇನ್ ಕಿಡಿಕಾರಿದ್ದಾರೆ. ಇದೇ ವೇಳೆ, ಎಚ್ಡಿಕೆಯವರ ಕಿರಾತಕರನ್ನ ಸೋಲಿಸಬೇಕು ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಿಮ್ಮನ್ನು ಕಾಂಗ್ರೆಸ್ಸಿನವರು ಮುಖ್ಯಮಂತ್ರಿ ಮಾಡಿದಾಗ ಕಾಂಗ್ರೆಸ್ಸಿನವರು ಕಿರಾತಕರಾಗಿರಲಿಲ್ಲವಾ.? ಎಂದು ಕೇಳಿರುವ ಅವರು, ಈಗ ಒಬ್ಬ ಮುಸ್ಲಿಂ ವ್ಯಕ್ತಿಯಲ್ಲಿ ಗೆಲ್ಲಿಸಿದಕ್ಕೆ ಅವರು ಕಿರಾತಕರಾದ್ರಾ.? ಆ ಪದ ನಿಮಗೆ ಅನ್ವಯಿಸುತ್ತದೆ, ನೀವು ಕಿರಾತಕರು. ಹೆಚ್ಡಿಕೆ ಸೋಲಿನ ಹತಾಶೆಯಲ್ಲಿ ಹೀಗೆ ಮಾತನಾಡ್ತಿದ್ದಾರೆ’’ ಎಂದು ಹೇಳಿದ್ದಾರೆ.
Mla Iqbal Hussain slams Jds Kumaraswamy of making Dr Manjunath contest against DK Suresh, says does Kumaraswamy have no guts t stand against DK Suresh ?
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm