ಬ್ರೇಕಿಂಗ್ ನ್ಯೂಸ್
14-03-24 02:26 pm HK News Desk ಕರ್ನಾಟಕ
ಕೊಪ್ಪಳ, ಮಾ.14: ಸಂಸದ ಸಂಗಣ್ಣ ಕರಡಿಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಿದ್ದಂತೆಯೇ ಅವರ ಬೆಂಬಲಿಗರ, ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಬೆಂಬಲಿಗರ ಸಿಟ್ಟಿಗೆ ಗುರುವಾರ ನಗರದ ಬಿಜೆಪಿ ಕಚೇರಿ ಗಾಜುಗಳು ಪುಡಿಯಾಗಿವೆ.
ಅಲ್ಲದೆ, ಸಂಗಣ್ಣ ಕರಡಿ ಬೆಂಬಲಿಗರು ಬಿಜೆಪಿ ಕಚೇರಿಯಲ್ಲಿ ದಾಂಧಲೆ ನಡೆಸಿದ್ದು, ನೂತನ ಅಭ್ಯರ್ಥಿ ವೈದ್ಯ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗಿದರು.

ಇನ್ನು ಸುದ್ದಿಗೋಷ್ಠಿ ಮುಗಿಸಿ ಹೊರ ಬಂದ ಬಸವರಾಜ ಕ್ಯಾವಟರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ರನ್ನು ತರಾಟೆಗೆ ತೆಗೆದುಕೊಂಡರು. ಒಂದು ಹಂತದಲ್ಲಿ ಪರಿಸ್ಥಿತಿ ಕೈ ಮಿರುವ ಹಂತಕ್ಕೆ ತಲುಪಿತ್ತು. ಕೊನೆಗೆ ಪೊಲೀಸರು ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಹಾಲಿ ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಕೆಲ ನಾಯಕರು ಕರಡಿ ಕುಟುಂಬವನ್ನು ತಮ್ಮ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಡರಾತ್ರಿ ಸಂಗಣ್ಣ ಕರಡಿ ಅವರಿಗೆ ಫೋನ್ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಲೋಕಸಭೆ ಟಿಕೆಟ್ ನೀಡುವ ಭರವಸೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುವೆ ಎಂದು ಸಂಗಣ್ಣ ಕರಡಿ ಹೇಳಿದ್ದಾರೆ.
ಇದರಿಂದ ಕರಡಿ ಸಂಗಣ್ಣ ಕುಟುಂಬದ ಮುಂದಿನ ನಡೆ ಕೂತೂಹಲ ಹುಟ್ಟಿಸಿದೆ. ಕಳೆದ ಎರಡು ಅವಧಿಯಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಈ ಬಾರಿ ಹ್ಯಾಟ್ರಿಕ್ ಜಯಭೇರಿ ಬಾರಿಸುವ ಕನವರಿಕೆಯಲ್ಲಿದ್ದಾರೆ. ಹೀಗಾಗಿ ಟಿಕೆಟ್ಗೆ ತೀವ್ರ ಪೈಪೋಟಿ ಒಡ್ಡಿದ್ದರು. ಅಲ್ಲದೆ, ಒಂದು ಹಂತದಲ್ಲಿ ಅವರಿಗೆ ಟಿಕೆಟ್ ಫೈನಲ್ ಆಗಿದೆ ಎಂಬ ಮಾತುಗಳೂ ಕೇಳಿ ಬಂದಿದ್ದವು. ಆದರೆ ಇದೀಗ ಕೊಪ್ಪಳ ಬಿಜೆಪಿ ಟಿಕೆಟ್ ವೈದ್ಯ ಬಸವರಾಜ ಕ್ಯಾವಟರ್ ಪಾಲಾಗಿದೆ.
Koppal Karadi Sanganna BJP ticket missed, members enter BJP Office vandalise window glass
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am