ಬ್ರೇಕಿಂಗ್ ನ್ಯೂಸ್
14-03-24 03:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಲೋಕಸಭೆ ಕ್ಷೇತ್ರಗಳನ್ನು ಅಂತಿಮಗೊಳಿಸಿದೆ. ಕೋಲಾರ, ಮಂಡ್ಯ, ಹಾಸನ ಕ್ಷೇತ್ರ ಜೆಡಿಎಸ್ ಪಾಲಾಗಿದೆ.
ಜೆಡಿಎಸ್ ಕನಿಷ್ಠ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿತ್ತು. ಆದ್ರೆ, ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಅಂತಿಮವಾಗಿ ಜೆಡಿಎಸ್ಗೆ ನಿರೀಕ್ಷೆಯಂತೆ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಹಾಸನದಲ್ಲಿ ಈಗಾಗಲೇ ಜೆಡಿಎಸ್ನ ಪ್ರಜ್ವಲ್ ರೇವಣ್ಣ ಸಂಸದರಿದ್ದು, ಅವರೇ ಮತ್ತೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಪಕ್ಷೇತರ ಸಂಸದೆ ಸುಮಲತಾ ಪ್ರತಿನಿಧಿಸುತ್ತಿದ್ದ ಮಂಡ್ಯವನ್ನು ಜೆಡಿಎಸ್ ಮರಳಿ ಭದ್ರಕೋಟೆಯಾಗಿದ್ದ ಯಶಸ್ವಿಯಾಗಿದೆ. ಬಿಜೆಪಿ ಹಾಲಿ ಸಂಸದ ಇರುವ ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿಗೆ ಈ ಬಾರಿ ಟಿಕೆಟ್ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಇನ್ನು ಮಂಡ್ಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ಗೆ ನಿರಾಸೆಯಾಗಿದ್ದು, ಅವರು ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಜೆಡಿಎಸ್ ಮಂಡ್ಯ ಕ್ಷೇತ್ರದಿಂದ ಸಿಎಸ್ ಪುಟ್ಟರಾಜು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಖುದ್ದು ಕುಮಾರಸ್ವಾಮಿ ಸ್ಪರ್ಧಿಸುವಂತೆ ಬಿಜೆಪಿ ಹೈಕಮಾಂಡ್ ಹೇಳಿತ್ತು. ಆದ್ರೆ, ಎಚ್ಡಿಕೆ ಪುಟ್ಟರಾಜು ಅವರನ್ನ ಅಂತಿಮಗೊಳಿಸಿದ್ದಾರೆ. ಹಾಸನದಲ್ಲಿ ನಿರೀಕ್ಷೆಯಂತೆ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಪಕ್ಕಾ ಆಗಿದೆ. ಆದ್ರೆ, ಕೋಲಾರದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿಲ್ಲ. ಮೂಲಗಳ ಪ್ರಕಾರ ಶಾಸಕ ಸಮೃದ್ಧಿ ಮಂಜುನಾಥ್ ಅವರನ್ನು ಅಖಾಡಕ್ಕಿಳಿಸಲು ಜೆಡಿಎಸ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಕೋಟಾದಲ್ಲಿ ಇರುವ ಈ ಮೂರು ಕ್ಷೇತ್ರಗಳು ಒಕ್ಕಲಿಗರ ಭದ್ರಕೋಟೆಗಳಾಗಿವೆ. ಒಕ್ಕಲಿಗರ ಮೇಲೆ ಜೆಡಿಎಸ್ಗೆ ಹಿಡಿತವಿದೆ. ಅಲ್ಲದೇ ಕುಮಾರಸ್ವಾಮಿ ಮತ್ತು ದೇವೇಗೌಡ ಒಕ್ಕಲಿಗ ಸಮುದಾಯದ ಪ್ರಭಾವಿ ವ್ಯಕ್ತಿಗಳಾಗಿದ್ದಾರೆ. ಕಾಂಗ್ರೆಸ್ನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಬಲ ಒಕ್ಕಲಿಗ ನಾಯಕ ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗರು ತಮ್ಮ ಬೆಂಬಲವನ್ನು ವಿಭಜಿಸಿದ ಪರಿಣಾಮ ಜೆಡಿಎಸ್ ಮೇಲೆ ತೀವ್ರ ಪರಿಣಾಮ ಬೀರಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರು ಯಾವ ರೀತಿ ಮತ ಚಲಾಯಿಸುತ್ತಾರೆ ಎಂಬುವುದರ ಮೇಲೆ ಫಲಿತಾಂಶ ನಿಂತಿದೆ.
Big Shock for Sumalatha Ambarish and Muniswami, Mandya, Kolar, Hassan list finalised.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am