ಬ್ರೇಕಿಂಗ್ ನ್ಯೂಸ್
15-03-24 04:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 15: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜ್ ಮುನೀರ್ ಎಂಬಾತನನ್ನು ಎನ್ಐಎ ಅಧಿಕಾರಿಗಳು 7 ದಿನಗಳ ಕಾಲ ಬುಧವಾರ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯಾದ ಮಾಜ್ ಮುನೀರ್ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿದ್ದ. ಇದೀಗ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ಬಳ್ಳಾರಿ ಮಾಡ್ಯೂಲ್ಗೂ ಸಾಮ್ಯತೆ ಇರುವುದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಇದಕ್ಕೂ ಮುನ್ನ ಕಳೆದ ವರ್ಷ ಡಿಸೆಂಬರ್ 17 ರಂದು ಬಳ್ಳಾರಿ ಮಾಡ್ಯೂಲ್ (ಬಳ್ಳಾರಿಯನ್ನು ಕೇಂದ್ರವನ್ನಾಗಿಸಿಕೊಂಡು ಕೃತ್ಯ) ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಎಂ.ಡಿ ಸುಲೇಮಾನ್, ಸೈಯದ್ ಸಮೀರ್ ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿ ಅನಾಸ್ ಇಕ್ಬಾಲ್ ಶೇಕ್, ದೆಹಲಿಯಲ್ಲಿ ಶಯಾನ್ ರೆಹಮಾನ್ ಅಲಿಯಾಸ್ ಹುಸೇನ್ನನ್ನು ಎರಡು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.
2023ರ ಡಿ. 17ರಂದು ರಾಜ್ಯ ಸೇರಿ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಸಿಸ್) ಉಗ್ರ ಸಂಘಟನೆಗಳು ಸಂಚು ರೂಪಿಸಿದ್ದ ಮಾಹಿತಿ ಸಂಗ್ರಹಿಸಿದ್ದ ರಾಷ್ಟ್ರೀಯ ತನಿಖಾ ದಳ(ಎನ್ಐಎ), ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಪ್ರಕರಣವನ್ನು ಬಯಲಿಗೆ ಎಳೆದಿತ್ತು. ಈ ವೇಳೆ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿತ್ತು.
The National Investigation Agency (NIA) on Wednesday took into custody maj Muneer for seven days in connection with the Rameswaram café blast case. Maj Muneer, the main accused in the Shivamogga trial blast case, was lodged in Parappana Agrahara jail.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm