ಬ್ರೇಕಿಂಗ್ ನ್ಯೂಸ್
15-03-24 04:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 15: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜ್ ಮುನೀರ್ ಎಂಬಾತನನ್ನು ಎನ್ಐಎ ಅಧಿಕಾರಿಗಳು 7 ದಿನಗಳ ಕಾಲ ಬುಧವಾರ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯಾದ ಮಾಜ್ ಮುನೀರ್ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿದ್ದ. ಇದೀಗ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ಬಳ್ಳಾರಿ ಮಾಡ್ಯೂಲ್ಗೂ ಸಾಮ್ಯತೆ ಇರುವುದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಇದಕ್ಕೂ ಮುನ್ನ ಕಳೆದ ವರ್ಷ ಡಿಸೆಂಬರ್ 17 ರಂದು ಬಳ್ಳಾರಿ ಮಾಡ್ಯೂಲ್ (ಬಳ್ಳಾರಿಯನ್ನು ಕೇಂದ್ರವನ್ನಾಗಿಸಿಕೊಂಡು ಕೃತ್ಯ) ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಎಂ.ಡಿ ಸುಲೇಮಾನ್, ಸೈಯದ್ ಸಮೀರ್ ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿ ಅನಾಸ್ ಇಕ್ಬಾಲ್ ಶೇಕ್, ದೆಹಲಿಯಲ್ಲಿ ಶಯಾನ್ ರೆಹಮಾನ್ ಅಲಿಯಾಸ್ ಹುಸೇನ್ನನ್ನು ಎರಡು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.
2023ರ ಡಿ. 17ರಂದು ರಾಜ್ಯ ಸೇರಿ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಸಿಸ್) ಉಗ್ರ ಸಂಘಟನೆಗಳು ಸಂಚು ರೂಪಿಸಿದ್ದ ಮಾಹಿತಿ ಸಂಗ್ರಹಿಸಿದ್ದ ರಾಷ್ಟ್ರೀಯ ತನಿಖಾ ದಳ(ಎನ್ಐಎ), ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಪ್ರಕರಣವನ್ನು ಬಯಲಿಗೆ ಎಳೆದಿತ್ತು. ಈ ವೇಳೆ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ 7 ಮಂದಿಯನ್ನು ಬಂಧಿಸಲಾಗಿತ್ತು.
The National Investigation Agency (NIA) on Wednesday took into custody maj Muneer for seven days in connection with the Rameswaram café blast case. Maj Muneer, the main accused in the Shivamogga trial blast case, was lodged in Parappana Agrahara jail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am