ಬ್ರೇಕಿಂಗ್ ನ್ಯೂಸ್
17-03-24 02:05 pm HK News Desk ಕರ್ನಾಟಕ
ಶಿವಮೊಗ್ಗ, ಮಾ.17: ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಪಿ ಕಪಿಮುಷ್ಟಿಯಿಂದ ತಪ್ಪಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ನೊಂದ ಕಾರ್ಯಕರ್ತರ ಧ್ವನಿಯಾಗಿ ನಾನು ಚುನಾವಣೆ ಸ್ಪರ್ಧಿಸುತ್ತೇನೆ. ಯಾರೇ ಬಂದು ಹೇಳಿದರೂ ನಾನು ಚುನಾವಣೆ ಎದುರಿಸುತ್ತೇನೆ.
ಯಡಿಯೂರಪ್ಪ ಹಾಗೂ ಅವರ ಮಕ್ಕಳಿನಿಂದ ಪಕ್ಷ ಮುಕ್ತವಾಗಬೇಕು. ಹಾಗಾಗಿ ಚುನಾವಣೆ ಸ್ಪರ್ಧೆ ಮಾಡ್ತೀನಿ. ಯಡಿಯೂರಪ್ಪ ನೇತೃತ್ವದಲ್ಲಿ ತುಂಬಾ ಸೀಟು ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. ಬಿಜೆಪಿಯಲ್ಲಿ ಆಗುತ್ತಿರುವ ಕೆಟ್ಟ ರಾಜಕಾರಣ ಕೇಂದ್ರದ ನಾಯಕರಿಗೆ ಗೊತ್ತಾಗಬೇಕು ಎಂದರು.



ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ನನ್ನ ದೇವರು. ಪ್ರಾಣ ಹೋದರೂ ಮೋದಿ ಬಿಡಲಿಲ್ಲ. ಆದರೆ ನಾನು ರಾಘವೇಂದ್ರ ವಿರುದ್ಧ ಸ್ಪರ್ಧೆ ಮಾಡುತ್ತಿರುವುದು. ಹಾಗಾಗಿ ನಾಳೆಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಗೆದ್ದ ಮೇಲೆ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ನಾಳೆ ಅವರನ್ನು ಭೇಟಿ ಮಾಡಲ್ಲ. ಚುನಾವಣೆ ಮಾಡುತ್ತಿದ್ದೇನೆ. ಹಾಗಾಗಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು.
ಮೊನ್ನೆ ಶಿವಮೊಗ್ಗದಲ್ಲಿ ನಮ್ಮ ಕಾರ್ಯಕರ್ತರ ಸಭೆ ಮಾಡಿ ಅಭಿಪ್ರಾಯ ಪಡೆದೆ. ಸಭೆ ಅಷ್ಟು ಅದ್ದೂರಿಯಾಗಿ ನಡೆಯುತ್ತದೆ ಎಂದುಕೊಂಡಿರಲಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಂದು ಘೋಷಣೆ ಮಾಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದರು.

ಆರಗ ಜ್ಞಾನೇಂದ್ರ ಅವರು ಬಂದಿದ್ದರು. ಯಾಕೆ ನಾನು ಸ್ಪರ್ಧೆ ಮಾಡುತ್ತಿದ್ದೇನೆಂದು ಅವರಿಗೆ ತಿಳಿಸಿದ್ದೇನೆ. ಹಿಂದುತ್ವವಾದಿಗಳಿಗೆ ಮೋಸವಾಗಿದೆ. ಟಿಕೆಟ್ ತಪ್ಪಿಸುವ ಕೆಲಸವಾಗಿದೆ. ಯಡಿಯೂರಪ್ಪನವರ ಕುಟುಂಬದ ಕೈಯಲ್ಲಿ ಪಾರ್ಟಿ ಸಿಲುಕಿಕೊಂಡಿದೆ. ಯಡಿಯೂರಪ್ಪ ಹೇಳಿದ ಹಾಗೆ ವರಿಷ್ಠರು ಕೇಳುತ್ತಾರೆ. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದಾಗ ಗೆದ್ದಿದ್ದು ಆರು ಸೀಟು. ಯಡಿಯೂರಪ್ಪ ದೊಡ್ಡ ನಾಯಕನೆಂದು ಕೇಂದ್ರದ ನಾಯಕರು ಎಂದುಕೊಂಡಿದ್ದಾರೆ. ಯತ್ನಾಳ್ ಗೆ ಯಾಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿಲ್ಲ. ಇನ್ನೊಬ್ಬ ಲಿಂಗಾಯತ ನಾಯಕ ಬೆಳೆಯಲು ಇವರಿಗೆ ಇಷ್ಟವಿಲ್ಲ. ಸಿ.ಟಿ.ರವಿ ಸಚಿವ ಸ್ಥಾನ ಬಿಟ್ಟು ಪಕ್ಷ ಸಂಘಟಿಸಿದರು. ಅವರನ್ನು ಬೇಕಾದರೂ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕಿತ್ತು. ಸಿ.ಟಿ.ರವಿ ಯಾವುದರಲ್ಲಿ ಕಡಿಮೆ ಇದ್ದರು? ಲಿಂಗಾಯತರು ಬೇಡ ಒಕ್ಕಲಿಗರು ಬೇಡ ಕೊನೆಯ ಪಕ್ಷ ನನ್ನನ್ನು ಯಾಕೆ ರಾಜ್ಯಾಧ್ಯಕ್ಷ ಮಾಡಲಿಲ್ಲ. ಪಕ್ಷ ಹೇಳಿದ ಹಾಗೆ ನಾನು ಇಲ್ಲಿಯವರೆಗೆ ಕೇಳಿದ್ದೇನೆ ಎಂದು ಈಶ್ವರಪ್ಪ ಹೇಳಿದರು.
Eshwarappa slams Yediyurappa says BJP should be far way from both father and son. Central leaders have taught that
Yediyurappa is the top leader in state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am