ಬ್ರೇಕಿಂಗ್ ನ್ಯೂಸ್
18-03-24 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಿಎಂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿಕೊಂಡಿರುವ ಸಂಸದ ಸದಾನಂದ ಗೌಡ ಬಿಜೆಪಿ ತೊರೆಯುವ ಸಾಧ್ಯತೆ ಕಂಡುಬಂದಿದ್ದು, ಕಾಂಗ್ರೆಸ್ ಸೇರಿ ಮೈಸೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಡಿವಿ ಸದಾನಂದಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ನಾಯಕರು ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಡೀವಿ, ನಾಳೆಯೇ ತನ್ನ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ.
ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, 2011ರಲ್ಲಿ ದಿಢೀರ್ ಆಗಿ ಮುಖ್ಯಮಂತ್ರಿಯಾಗಿದ್ದರು. ಎನ್ಡಿಎ ಸರಕಾರದಲ್ಲಿ ರೈಲು, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಸದಾನಂದಗೌಡ ಕಾರ್ಯ ನಿರ್ವಹಿಸಿದ್ದಾರೆ.
ಈ ಬಾರಿ ಲೋಕಸಭೆ ಚುನಾವಣೆ ಮೊದಲೇ ತನ್ನ ರಾಜಕೀಯ ನಿವೃತ್ತಿ ಬಗ್ಗೆ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಶೋಭಾ ಕರಂದ್ಲಾಜೆಗೆ ಬಿಟ್ಟು ಕೊಟ್ಟಿದ್ದರು. ಇದರಿಂದ ಮುನಿಸಿಕೊಂಡಿದ್ದ ಡಿವಿ ಅವರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿದ್ದಾರೆ. ಹಾಗಿದ್ದರೂ ತಾನೆಂದೂ ಕಾಂಗ್ರೆಸ್ ಸೇರೋದಿಲ್ಲ ಎಂದೇ ಹೇಳುತ್ತಿದ್ದರು. ಕಾಂಗ್ರೆಸ್ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿ ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.
Veteran BJP leader, former Karnataka CM and Union Minister DV Sadananda Gowda may quit the party and contest from Mysuru as Congress candidate. The 72-year old leader is celebrating his birthday today (Monday).
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am